Advertisement

ಕಾಂಗ್ರೆಸ್‌ ಟಿಕೆಟ್‌ಗೆ ಅರ್ಜಿ ಹಾಕಿದ ಕಾಗೋಡು

06:35 AM Mar 13, 2018 | Team Udayavani |

ಸಾಗರ: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ “ಇದು ನನ್ನ ಕೊನೆಯ  ಸ್ಪರ್ಧೆ’ ಎಂದು ಘೋಷಿಸಿದ್ದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಈ ಬಾರಿಯೂ ಸಾಗರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ಗೆ ಅರ್ಜಿ ಗುಜರಾಯಿಸಿದ್ದಾರೆ. 

Advertisement

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಿಂದಲೇ ಸ್ಪರ್ಧಿಸಲು ಈಗಾಗಲೇ ಪಕ್ಷದ ಚೌಕಟ್ಟಿನಲ್ಲಿ ಅರ್ಜಿ ಸಲ್ಲಿಸಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸಲು ಜನರ ಪ್ರೀತಿಗಿಂತ ಪಕ್ಷದ ವಿಶ್ವಾಸವೇ ಮುಖ್ಯ. ಈಗ ಚುನಾವಣೆ ಎದುರಿಸುವುದು ಸುಲಭದ ಕೆಲಸವಲ್ಲ. ಬೇರೆ ಬೇರೆ ರೀತಿಯ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next