Advertisement

ಕಾಗೋಡು ಬಯಸಿದರೆ ಸಚಿವ ಸ್ಥಾನ: ರೇವಣ್ಣ

06:50 AM Nov 10, 2018 | |

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ ಯಾವುದೇ ಸಮಸ್ಯೆಯಿಲ್ಲ. ಯಾರನ್ನು
ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು.

Advertisement

ಸದ್ಯದಲ್ಲೇ ಸಮಯ ನಿಗದಿಯಾಗಲಿದೆ ಎಂದು ಹೇಳಿದರು. ಕಾಗೋಡು ತಿಮ್ಮಪ್ಪ ಬಯಸಿದರೆ ಅವರಿಗೆ ಸಚಿವ ಸ್ಥಾನ ನೀಡಲು ಅಭ್ಯಂತರ ಇಲ್ಲ. ನನಗೆ ಹೆಚ್ಚುವರಿಯಾಗಿ ಇಂಧನ ಖಾತೆ ಕೊಟ್ಟರೂ ನಿಭಾಯಿಸಲು ಸಿದ್ಧ ಎಂದು ತಿಳಿಸಿದರು.

ನಮಗೆ ಪಕ್ಷ ಮುಖ್ಯ, ಪಕ್ಷ ಅಧಿಕಾರದಲ್ಲಿದ್ದರಷ್ಟೆ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಇದು ಅರ್ಥ ಮಾಡಿಕೊಳ್ಳಬೇಕು. ಒಂದೊಮ್ಮೆ ಸಂಕಷ್ಟ ಎದುರಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದಟಛಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಈ ಮಧ್ಯೆ, ಸಹಕಾರ ಸಚಿವ ಬಂಡೆಪ್ಪ ಕಾಂಶಂಪೂರ್‌ ಮಾತನಾಡಿ, ಕಾಗೋಡು ತಿಮ್ಮಪ್ಪ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಪದ್ಮನಾಭನಗರದಲ್ಲಿ ಯಾವ ತೀರ್ಮಾನ ಆಗುತ್ತೋ ಅದಕ್ಕೆ ನಾವೆಲ್ಲರೂ ಬದಟಛಿ. ಪಕ್ಷದ ನಾಯಕರು ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next