Advertisement

ಮುಸ್ಲಿಮರನ್ನು ಓಡಿಸಿ ಇಪ್ಪತ್ತು ವರ್ಷಗಳ ಕಾಲ ಆಡಳಿತ ಮಾಡುವ ಹುನ್ನಾರ ನರೇಂದ್ರ ಮೋದಿಯದ್ದು

09:54 AM Dec 20, 2019 | Team Udayavani |

ಶಿವಮೊಗ್ಗ: ಪ್ರಧಾನಿ ನರೆಂದ್ರ ಮೋದಿ ಪೌರತ್ವ ಕಾಯ್ದೆಯನ್ನ ತಂದಿದ್ದಾನೆ. ಮುಸ್ಲಿಮರನ್ನು ದೇಶದಿಂದ ಓಡಿಸುವ ಉದ್ದೇಶ ಅವರದ್ದಾಗಿದೆ. ಮುಸ್ಲಿಮರನ್ನು ಓಡಿಸಿ ಇನ್ನೂ ಇಪ್ಪತ್ತು ವರ್ಷಗಳ ಕಾಲ ಆಡಳಿತ ಮಾಡುವ ಹುನ್ನಾರ ಇದೆ ಎಂದು ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಹೇಳಿದರು.

Advertisement

ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ, ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಉಳಿಯಬೇಕು. ಕಾಂಗ್ರೆಸ್ ಪಕ್ಷ ಈ ಕಾಯ್ದೆ ವಿರುದ್ದ ಹೋರಾಟ ಮಾಡುತ್ತಿದೆ. ಬಿಜೆಪಿ ಪಕ್ಷ ಕೆಳಗಿಳಿಸುವುದೇ ಕಾಂಗ್ರೆಸ್ ಪಕ್ಷದ ಗುರಿ. ಈ ಹೋರಾಟದಲ್ಲಿ ನಾನು ಸೇರಿದಂತೆ ಹಲವು ನಾಯಕರು ಜೈಲಿಗೆ ಹೋಗುವುದಕ್ಕೂ ಸಿದ್ದ. ಕಾಯ್ದೆ ವಿರುದ್ದ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಮುಂದಿನ ದಿನಗಳಲ್ಲಿ ಹೋರಾಟ ಮಾಡ್ತೇವೆ ಎಂದು ಅವರು ಹೇಳಿದರು.

ನಿಷೇಧಾಜ್ಞೆಯ ಹಿನ್ನಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜಿಲ್ಲೆಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಹಿಂಪಡೆಯಿತು.

ಕೋಮು ಸೌಹಾರ್ಧತೆ ಕದಡಿ, ಕಾಂಗ್ರೆಸ್ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂಬ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಹೇಳಿಕೆಗೆ ಕಾಗೋಡು ತಿಮ್ಮಪ್ಪ ತಿರುಗೇಟು ನೀಡಿ, ಎಲ್ಲರಿಗಿಂತ ದೊಡ್ಡ ದೇಶದ್ರೋಹಿ ಶಂಕರಮೂರ್ತಿ. ಅವರಿಗೆ ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಪರಿಶ್ರಮ ಗೊತ್ತಿಲ್ಲ. ಅಧಿಕಾರ ಅನುಭವಿಸಿ, ಈಗ ಅಧಿಕಾರ ಉಳಿಸಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ. ಅವರ ತಲೆಯಲ್ಲಿ ಇವರೆಲ್ಲರೂ ಪಾಕಿಸ್ತಾನ ಕಡೆಗೆ ಇದ್ದಾರೆ ಎಂದುಕೊಂಡಿದ್ದಾರೆ ಎಂದು ಕಿಡಿ ಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next