Advertisement

“ಕೈ”ಬೆಂಬಲಿಸುವವರೇ IT ಟಾರ್ಗೆಟ್‌: ಡಿ.ಕೆ. ಶಿವಕುಮಾರ್‌

11:31 PM Apr 19, 2023 | Team Udayavani |

ಬೆಂಗಳೂರು: “ಯಾರೆಲ್ಲ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೋ, ಅಂತಹವರ ಮನೆಗಳ ಮೇಲೆ ಐಟಿ ಮತ್ತು ಇಡಿ ದಾಳಿ ಆಗುತ್ತಿವೆ. ಆದರೆ, ಇದಾವುದಕ್ಕೂ ಬಗ್ಗುವ ಮಾತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಖಡಕ್‌ ಆಗಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿರುವವರನ್ನು ಗುರಿಯಾಗಿಟ್ಟು ದಾಳಿ ನಡೆಸಲಾಗುತ್ತಿದೆ. ಮಂಗಳವಾರವೂ ಕೆಲವರು ನನ್ನ ಮನೆಗೆ ಬಂದಿದ್ದರು. ಐಟಿ ಅಧಿಕಾರಿಗಳು, “ನೀನು ಭಾರತ ಜೋಡೋ ಯಾತ್ರೆಗೆ ಕೋಟಿ ಗಟ್ಟಲೆ ಹಣ ನೀಡಿದ್ದೀಯಾ ಎಂದು ಹೆದರಿಸುತ್ತಿರುವುದಾಗಿ” ಅಲವತ್ತುಕೊಂಡರು. ಅವರು ಎಷ್ಟಾದರೂ ದಾಳಿ ಮಾಡಿ ಬೆದರಿಕೆ ಹಾಕಲಿ, ಕಾಂಗ್ರೆಸ್‌ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಉತ್ತಮ ಆಡಳಿತ ನೀಡಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲಿಂಗಾಯತ ನಾಯಕರು ಯಡಿಯೂರಪ್ಪ ಅವರ ನಿವಾಸದಲ್ಲಿ ಸಭೆ ನಡೆಸುವ ಬಗ್ಗೆ ಕೇಳಿದಾಗ, “ಬಿಜೆಪಿ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಮಾಡಿ ಬಳಿಕ ಅವರಿಂದ ಅಧಿಕಾರ ಕಸಿದುಕೊಂಡಿತು. ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹೀಗಾಗಿ ಲಿಂಗಾಯತ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್‌ ಮಾಡಲಿದೆ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next