Advertisement

Kalaburagi; ನೇಣಿಗೆ ಶರಣಾದ ಪೊಲೀಸ್ ಕಾನ್ಸಟೇಬಲ್

09:17 AM Jun 23, 2024 | Team Udayavani |

ಕಲಬುರಗಿ: ಜಿಲ್ಲೆ ಸೇಡಂ ತಾಲೂಕಿನ ಮಾಡಬೂಳ ಠಾಣೆಯ ಪೊಲೀಸ್ ಕಾನ್ಸಟೇಬಲ್ ದೊಡ್ಡೇಶ್ (40) ನಗರದ ಹೊರವಲಯದ ಉದನೂರು ರಸ್ತೆಯ ಪಕ್ಕದ ಜಮೀನಿನಲ್ಲಿ ಇರುವ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ದೊಡ್ಡೇಶ್ ಅವರು ಕಲಬುರಗಿ ನಗರದ ಹೈ ಕೋರ್ಟ್ ಬಳಿಯ ಸಂತೋಷ ಕಾಲೊನಿಯ ಮನೆಯೊಂದರಲ್ಲಿ ವಾಸವಾಗಿದ್ದರು.

ಸ್ಥಳಕ್ಕೆ ವಿವಿ ಠಾಣೆಯ ಪಿಐ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ದೇಹವನ್ನು ಜಿಮ್ಸ್ ಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತಪಡಿಸಿರುವ ವಿಶ್ವವಿದ್ಯಾಲಯ ಪೊಲೀಸರು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next