Advertisement
ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಇರುವುದರಿಂದ 12ನೇ ಶತಮಾನದ ಸಾಮಾಜಿಕ ಹರಿಕಾರನಿಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡುವುದರೊಂದಿಗೆ ಜಿಲ್ಲಾಡಳಿತದಿಂದ ಸರಳವಾಗಿ ಜಯಂತಿ ಆಚರಿಸಲಾಯಿತು. ಸಂಸದ ಡಾ.ಉಮೇಶ ಜಾಧವ, ಶಾಸಕ ಡಾ.ಅಜಯ ಸಿಂಗ್, ಕಲಬುರಗಿನಗರ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಪ್ರೊಬೇಷನರಿ ಐಎಎಸ್ ಅಧಿ ಕಾರಿ ಗೋಪಾಲಕೃಷ್ಣ ಬಿ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಅವರು ಸಹ ಮಹಾನ್ ದಾರ್ಶನಿಕನಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.