Advertisement

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

12:08 AM May 20, 2024 | Team Udayavani |

ಕಲಬುರಗಿ: ಚುನಾವಣಾ ವೈಷಮ್ಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕವಾಗಿ ಹಲ್ಲೆ ಗೈದ ಘಟನೆ ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ರವಿವಾರ ನಡೆದಿದೆ.‌

Advertisement

ರಾಘವೇಂದ್ರ ಎನ್ನುವ ಬಿಜೆಪಿ ಕಾರ್ಯಕರ್ತನ ಮೇಲೆ ಕೆಲವರು ದಾಳಿ ನಡೆಸಿ ಹಲ್ಲೆ ನಡೆಸಿದ್ದಾರೆ. ಮನೆಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ನಡೆಸಲಾಗಿದೆ. ವಿದ್ಯುತ್ ದೀಪ ತೆಗೆದು ಹಲ್ಲೆ ನಡೆಸಲಾಗಿದೆಯಂತೆ.

ಹಲ್ಲೆಯಲ್ಲಿ ರಾಘವೇಂದ್ರ ತೀವ್ರ ಗಾಯಗೊಂಡಿದ್ದು, ಚಿಕಿತ್ಸೆ ಗಾಗಿ ಕಲಬುರಗಿಯ ಜೀಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಕುರಿತು ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸದ ಭೇಟಿ
ದಾಳಿಯಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ರಾಘವೇಂದ್ರ ಆರೋಗ್ಯ ವಿಚಾರಿಸಲು ಸಂಸದ ಡಾ. ಉಮೇಶ ಜಾಧವ್ ಆಸ್ಪತ್ರೆಗೆ ಭೇಟಿ ನೀಡಿದರು.

ಕಾಂಗ್ರೆಸ್ ಗೂಂಡಾಗಳು ಅಮಾನುಷ ರೀತಿಯಲ್ಲಿ ದಾಳಿ ನಡೆಸಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದು, ಖಂಡನೀಯವಾಗಿದೆ. ಹಲ್ಲೆ ಯನ್ನು ಕೊಲೆ ಯತ್ನವೆಂದು ಪ್ರಕರಣ ದಾಖಲಿಸಿ ಆರೋಪಿಗಳನ್ನು ಈ ಕೂಡಲೇ ಬಂಧಿಸಬೇಕೆಂದು ಸಂಸದರು ಒತ್ತಾಯಿಸಿದರು. ಚುನಾವಣೆ ಮುಗಿದರೂ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ನಿಲ್ಲುತ್ತಿಲ್ಲ. ಪೊಲೀಸ ರು ಕೆಲವರ ಕೈಗೊಂಬೆಯಾಗಿರುವುದೇ ಹಲ್ಲೆ ಗಳಿಗೆ ಕಾರಣವಾಗುತ್ತಿದೆ ಎಂದು ಬಿಜೆಪಿ ಮುಖಂಡ ಶಿವಕಾಂತ ಮಹಾಜನ್ ಆರೋಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next