Advertisement

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

11:05 PM Sep 17, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರ ಕಲಬುರಗಿಯಲ್ಲಿ ನಡೆಸಿದ ಸಚಿವ ಸಂಪುಟ ಸಭೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ವ್ಯಂಗ್ಯವಾಡಿರುವ ವಿಪಕ್ಷ ನಾಯಕ ಆರ್‌. ಅಶೋಕ್‌, ಕಲಬುರಗಿ ಕ್ಯಾಬಿನೆಟ್‌ ಎಂದರೆ “ಹೋದ ಸಿದ್ದ, ಬಂದ ಸಿದ್ದ’ ಎಂಬಂತಾಗಿದೆ ಎಂದು ಟೀಕಿಸಿದ್ದಾರೆ.

Advertisement

ರಾಜ್ಯದಲ್ಲಿ ಭ್ರಷ್ಟಾಚಾರ ಪ್ರಕರಣ ಹೆಚ್ಚುತ್ತಿದೆ. ದಿನಕ್ಕೊಂದು ಹಗರಣ ಹೊರ ಬರುತ್ತಿದೆ. ವಿಷಯಾಂತರ ಮಾಡಲು ಇಂಥ ಮಾರ್ಗ ಹುಡುಕಿಕೊಳ್ಳುತ್ತಿದ್ದಾರೆ. ಕಲಬುರಗಿಯಲ್ಲಿ ಒಳ್ಳೆ ಹೈದ್ರಾಬಾದ್‌ ಬಿರಿಯಾನಿ ಸಿಗುತ್ತದೆ. ಎಲ್ಲರೂ ತಿಂದು ಬರುತ್ತಾರೆ. ಇದರಿಂದ ಆ ಭಾಗದ ಜನರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ವಾಗ್ಧಾಳಿ ನಡೆಸಿದರು.

ನಾಗಮಂಗಲ ಪ್ರಕರಣದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್‌ ಸರಕಾರ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ಅನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ. ಪಾಕಿಸ್ಥಾನಕ್ಕೆ ಜೈಕಾರ ಹಾಕಿರುವ ಬಗ್ಗೆ ಮೊದಲು ಪರಿಶೀಲಿಸಲಿ. ಆದರೆ ಸಚಿವ ಪ್ರಿಯಾಂಕ್‌ ಖರ್ಗೆಯಂಥವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆ. ಎಲ್ಲಿ ಕಾಂಗ್ರೆಸ್‌ ಇರುತ್ತದೆಯೋ ಅಲ್ಲಿ ಮುಸ್ಲಿಂ ಭಯೋತ್ಪಾದಕರಿಗೆ, ಮುಸ್ಲಿಂ ಕೋಮುವಾದಿಗಳಿಗೆ ಹಬ್ಬದ ವಾತಾ ವರಣ ಇರುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next