Advertisement

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

09:41 PM Apr 22, 2024 | Team Udayavani |

ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದಲ್ಲಿ ಕಾರುಗಳ ನಡುವೆ ಸಂಭವಿಸಿದ ಮುಖಾ ಮುಖಿ ಅಪಘಾತದಲ್ಲಿ ಮಠಾಧೀಶರೊಬ್ಬರು ವಿಧಿವಶರಾಗಿ, ಮತ್ತೋರ್ವ ಸ್ವಾಮೀಜಿ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

Advertisement

ಆಳಂದ ತಾಲೂಕಿನ ಬಂಗರಗಾ ಹಿರೇಮಠದ ಗುರುಲಿಂಗ(43) ಶಿವಾಚಾರ್ಯರರು ಆಸ್ಪತ್ರೆಗೆ ಸಾಗಿಸುವ ಮಾರ್ಗ ನಡುವೆ ಕೊನೆಯುಸಿರೆಳೆದಿದ್ದಾರೆ.
ಇದೇ ಅಫಘಾತದಲ್ಲಿ ಕಿಣ್ಣಿ ಸುಲ್ತಾನ ಗ್ರಾಮದ ಮಠಾಧೀಶ ಶಾಂತಲಿಂಗ ಶಿವಾಚಾರ್ಯ ರು ಗಾಯಗೊಂಡಿದ್ದು, ಆಸ್ಪತ್ರೆ ದಾಖಲಿಸಲಾಗಿದೆ.

ಎದುರಿನ ಇನ್ನೊಂದು ಕಾರಿನಲ್ಲಿದ್ದವರ ಪೈಕಿ ಓರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next