Advertisement

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

09:03 AM Oct 21, 2024 | Team Udayavani |

ಕಲಬುರಗಿ: ಕ್ಷುಲ್ಲಕ ವಿಚಾರಕ್ಕೆ ಹೆತ್ತ ತಾಯಿಯೊಬ್ಬಳು ತನ್ನ ಮೂವರು ಮಕ್ಕಳಿಗೆ ಪಾನೀಯದಲ್ಲಿ ವಿಷವುಣಿಸಿ ಬಳಿಕ ತಾನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ಸೋಮವಾರ (ಅ.21) ರಂದು ನಡೆದಿರುವುದಾಗಿ ವರದಿಯಾಗಿದೆ.

Advertisement

ಚೈತನ್ಯ (4) ಧನುಷ್ (3) ಲಕ್ಷ್ಮೀ ಒಂದೂವರೆ ತಿಂಗಳ ಮಗುವಿಗೆ ವಿಷ ಕುಡಿಸಿದ ತಾಯಿ ಗೀತಾಬಾಯಿ ಸಂತೋಷ್ ರಾಠೋಡ್ (30) ವಿಷ ಸೇವನೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಮಕ್ಕಳಿಗೆ ಹೊಡೆಯುವುದು ಮಾಡುತಿದ್ದ ವಿಚಾರವನ್ನು ಗಂಡ ಪ್ರಶ್ನಿಸಿದ್ದಕ್ಕೆ ಗಂಡನ ಜೊತೆ ಜಗಳ ಶುರು ಮಾಡಿದ ಪತ್ನಿ ಜಗಳ ವಿಕೋಪಕ್ಕೆ ತಿರುಗಿದ್ದು ಇದರಿಂದ ಕುಪಿತಗೊಂಡ ಪತ್ನಿ ತನ್ನ ಮೂರೂ ಮಕ್ಕಳಿಗೆ ಬೆಳೆಗೆಳಿಗೆ ಹೊಡೆಯುವ ಕ್ರಿಮಿನಾಶಕವನ್ನು ಸ್ಪ್ರೈಟ್ ಪಾನೀಯಕ್ಕೆ ಮಿಕ್ಸ್ ಮಾಡಿ ಮಕ್ಕಳಿಗೆ ಕುಡಿಸಿ ಬಳಿಕ ತಾನು ಕುಡಿದಿದ್ದಾಳೆ.

ವಿಷ ಕುಡಿದ ಬಳಿಕ ಹೊಟ್ಟೆ ನೋವಿನಿಂದ ಚೀರಾಡುತ್ತಿದ್ದ ಮಕ್ಕಳನ್ನು ತಾಂಡಾದ ಅಕ್ಕ ಪಕ್ಕದ ನಿವಾಸಿಗಳು ಗಮನಿಸಿ ಗಂಡನಿಗೆ ವಿಷಯ ಮುಟ್ಟಿಸಿ ನಾಲ್ವರನ್ನು ಚಿಂಚೋಳಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ: Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Advertisement

Udayavani is now on Telegram. Click here to join our channel and stay updated with the latest news.

Next