Advertisement

ಕಲಬುರಗಿ ಜಿಲ್ಲಾಧಿಕಾರಿ ಶರತ್ ವರ್ಗಾವಣೆ: ವಿ.ವಿ. ಜೋಸ್ಸ್ನಾ ನೂತನ ಡಿಸಿ

08:31 PM Aug 28, 2020 | Hari Prasad |

ಕಲಬುರಗಿ: ಜಿಲ್ಲಾಧಿಕಾರಿ ಶರತ್ ಬಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

Advertisement

ನೂತನ ಜಿಲ್ಲಾಧಿಕಾರಿಯಾಗಿ ವಿ.ವಿ. ಜೋಸ್ಸ್ನಾಅವರು ಅಧಿಕಾರ ಸ್ವೀಕರಿಸಲಿದ್ದಾರೆ.

2001ರ ಐಎಎಸ್ ಬ್ಯಾಂಚ್ ನ ಶರತ್ ಬಿ. ಕಳೆದ ಆಗಸ್ಟ್ 31ರಂದು ಕಲಬುರಗಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇವರ ಅಧಿಕಾರವಧಿ ಒಂದು ವರ್ಷ ಪೂರ್ಣಗೊಳ್ಳಲು ಇನ್ನೂ ಮೂರು ದಿನಗಳು ಬಾಕಿ‌ ಇರುವಂತೆಯೇ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರಿನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಫೆಬ್ರವರಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ನಡೆಯುವಲ್ಲಿ ಶರತ್ ಸಾಕಷ್ಟು ಶ್ರಮಿಸಿದ್ದರು. ಕೋವಿಡ್ ಸಂಬಂಧ ಮೊದಲ ಸಾವು ದಾಖಲಾದ ಸಮಯದಲ್ಲೂ ಸೋಂಕು ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ‌ಕೈಗೊಂಡಿದ್ದರು.

Advertisement

ಇದರ ನಡುವೆ ಇವರನ್ನು ಏಪ್ರಿಲ್ ನಲ್ಲಿ ದಿಡೀರ್ ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಆದರೆ, ಸಾರ್ವಜನಿಕರ ಆಕ್ಷೇಪ ಹಿನ್ನೆಲೆಯಲ್ಲಿ ಎರಡು ಗಂಟೆಯ ಅವಧಿಯಲ್ಲಿ ವರ್ಗಾವಣೆಗೆ ತಡೆ ನೀಡಲಾಗಿತ್ತು.


ಇದೀಗ ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿರುವ ವಿ.ವಿ. ಜೋಸ್ಸ್ನಾ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ‌ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next