Advertisement
ಕೋವಿಡ್ ರೋಗಿಗಳು ಮತ್ತು ಶಂಕಿತರನ್ನು ದಾಖಲಿಸಿರುವ ಇಎಸ್ಐ ಆಸ್ಪತ್ರೆಯಲ್ಲಿ ಸ್ವತ್ಛತೆ ಇಲ್ಲ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ರೋಗಿಗಳಿಗೆ ಗುಣಮಟ್ಟದ ಆಹಾರ ಪೂರೈಸುತ್ತಿಲ್ಲ…ಹೀಗೆ ಅನೇಕ ಆರೋಪಗಳು ಕೇಳಿ ಬರುತ್ತಿವೆ. ರೋಗಿಗಳು ತಮ್ಮ ಸಂಬಂಧಿಕರೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಾ ಅಲ್ಲಿನ ಪರಿಸ್ಥಿತಿಯನ್ನು ವಿವರಿಸುವ ಆಡಿಯೋ ಕ್ಲಿಪ್ಗ್ಳು ಸಹ ಹರಿದಾಡುತ್ತಿವೆ. ಮೇಲಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೇರವಾಗಿ ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರಿಗೆ ಇಎಸ್ಐ ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಪ್ರಶ್ನಿಸಲಾಗುತ್ತಿದೆ. ಹೀಗಾಗಿ ಸರ್ಕಾರ ಗಂಭೀರವಾಗಿ ಪರಿಗಣಿಸಿ ಆಸ್ಪತ್ರೆಯ ವ್ಯವಸ್ಥೆಯನ್ನು ಅವಲೋಕಿಸಲು ಅಧಿಕಾರಿಯನ್ನು ರವಾನಿಸಿತ್ತು. ಬೆಂಗಳೂರಿನ ಡಿಎಚ್ಒ ಡಾ.ಓಂಪ್ರಕಾಶ ಪಾಟೀಲ ಇಲ್ಲಿಗೆ ಬಂದು ಪರಿಶೀಲಿಸಿ ಹೋಗಿದ್ದಾರೆ. ಈ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ರಚಿಸಿರುವ “ಡಿಐಪಿಆರ್ ಕೋವಿಡ್-19′ ತಂಡದ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
Advertisement
ಇಎಸ್ಐ ಆಹಾರ ಪರೀಕ್ಷಿಸಿದ ಅಧಿಕಾರಿ
12:45 PM Apr 27, 2020 | Naveen |
Advertisement
Udayavani is now on Telegram. Click here to join our channel and stay updated with the latest news.