Advertisement

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

11:51 PM Oct 19, 2024 | Team Udayavani |

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್‌ನಂತಹ ಪ್ರಕರಣಗಳ ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳು ಅಮಾನತಾಗಿದ್ದಾರೆ. ಕಲಬುರಗಿ ಸೆಂಟ್ರಲ್‌ ಜೈಲಿನ ಜೈಲರ್‌ಗಳಾದ ಸೈನಾಜ್‌ ನೀಗೆವಾನ್‌ ಮತ್ತು ಪಾಂಡುರಂಗ ಹರವಾಳ ಎನ್ನುವವರನ್ನು ಕರ್ತವ್ಯಲೋಪದಡಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ| ಅನಿತಾ ಆರ್‌. ಮಾಹಿತಿ ನೀಡಿದ್ದಾರೆ. ಕಾರಾಗೃಹದಲ್ಲಿ ಮೊಬೈಲ್‌ ಬಳಕೆ ಹಾಗೂ ಐಷಾರಾಮಿ ಜೀವನದ ಜತೆಗೆ ಹನಿಟ್ರ್ಯಾಪ್‌ ಕುರಿತು ಸುದ್ದಿಯಾದ ಬಳಿಕ ಬಂದೀಖಾನೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆಗೆ ಆದೇಶಿಸಿದ್ದರು. ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದರು. ಈಗ ಇಬ್ಬರು ಜೈಲಾಧಿಕಾರಿಗಳ ತಲೆದಂಡವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next