Advertisement

Kalaburagi; ಆತ್ಮಹತ್ಯೆಗೈದ ಬಾಲಕಿ ಮನಗೆ ಸಚಿವ ಪ್ರಿಯಾಂಕ್ ಭೇಟಿ, ಪೋಷಕರಿಗೆ ಸಾಂತ್ವಾನ

10:31 AM Mar 12, 2024 | Team Udayavani |

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿರುವ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.

Advertisement

ಬಾಲಕಿ ಆತ್ಮಹತ್ಯೆ ಗೆ ದುಃಖ ವ್ಯಕ್ತಪಡಿಸಿದ ಸಚಿವರು ವಸತಿ ಶಾಲೆಯ ಮಕ್ಕಳಿಗೆ ಕೌನ್ಸಲಿಂಗ್ ಮಾಡಿಸಲಾಗುವುದು ಎಂದರು.

ಇಂತಹ ಸಂಕಷ್ಟದ ಸಂದರ್ಭದಲ್ಲಿ ತಾವು ಕುಟುಂಬದ ಜೊತೆಗೆ ಇರುವುದಾಗಿ ಭರವಸೆ ನೀಡಿದ ಸಚಿವರು, ಕಾಂಗ್ರೆಸ್ ಪಕ್ಷದ ವತಿಯಿಂದ ರೂ 1 ಲಕ್ಷ ಪರಿಹಾರದ ಹಣವನ್ನು ಪೋಷಕರಿಗೆ ನೀಡಿದರು.

ಈ ಸಂದರ್ಭದಲ್ಲಿ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ್ ಸಾಹೇಬ್, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ ಲ, ತಹಸೀಲ್ದಾರ ಶಾ ವಲಿ ಸೇರಿದಂತೆ ಹಲವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next