Advertisement

ಹಳೆ ವೈಷಮ್ಯ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಭೀಕರ ಕೊಲೆ

06:55 PM Jan 04, 2023 | Team Udayavani |

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.

Advertisement

ಭವಾನಿ ನಗರದ ಜನನಿಬಿಡ ಪ್ರದೇಶದಲ್ಲಿ ಯುವಕನ ಕೊಲೆಯಾಗಿದ್ದು, ಪ್ರಶಾಂತ್ ಕುಂಬಾರ್ (30) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.

ಹಳೆ ವೈಷಮ್ಯದ ಹಿನ್ನೆಲೆ ಚನ್ನವೀರ ನಗರ ನಿವಾಸಿಯಾದ ಮಂಜುನಾಥ್ ಎಂಬ ವ್ಯಕ್ತಿ ಕೊಲೆ ಮಾಡಿರಬಹುದು ಎಂದು ಪ್ರಶಾಂತ್‌ ಕುಂಬಾರ್ ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎನ್. ರವಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚೌ‌ಕ್‌ ಪೊಲೀಸ್‌ ಠಾಣಾಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ನಾಲ್ವರ ವಿರುದ್ಧ ಪ್ರಕರಣ ದಾಖಲು

Advertisement

Udayavani is now on Telegram. Click here to join our channel and stay updated with the latest news.

Next