Advertisement

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

02:03 PM May 15, 2024 | Team Udayavani |

ಕಲಬುರಗಿ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯೋಗ ಮಾಡಿಕೊಂಡಿದ್ದ ಮೂವರನ್ನು ವಿವಸ್ತ್ರಗೊಳಿಸಿ ಮರ್ಮಾಂಗಕ್ಕೆ ಶಾಕ್ ನೀಡಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂಳಿದ ಆರೋಪಿಗಳನ್ನು ಶೀಘ್ರ ಬಂಧಿಸುವುದಾಗಿ ಕಲಬುರಗಿ ‌ಮಹಾನಗರ ಪೊಲೀಸ್ ಆಯುಕ್ತ ಆರ್.‌ಚೇತನ ತಿಳಿದಿದ್ದಾರೆ.

Advertisement

ಅಮಾನೀಯ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಲಾಗಿದೆ. ಇನ್ನೂಳಿದ ಆರೋಪಿಗಳ ಶೋಧ ಕಾರ್ಯ ನಡೆದಿದೆ. ಮಾಹಿತಿ ದೊರಕಿದ್ದು, ಉಳಿದವರನ್ನು ಸಹ ಬಂಧಿಸಲಾಗುವುದು ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಟಿ ಯಲ್ಲಿ ತಿಳಿಸಿದರು.

ಶಸ್ತ್ರಾಸ್ತ್ರ ಕಾಯ್ದೆ ಅಡಿಯೂ ಪ್ರಕರಣ ದಾಖಲಿಸಲಾಗಿದೆ. ಭಯದ ಹಿನ್ನೆಲೆಯಲ್ಲಿ ಹಲ್ಲೆಗೊಳಗಾದ ಹಾಗೂ ದೂರು ನೀಡಿರುವವರಿಗೆ ಪೊಲೀಸ್ ರಕ್ಷಣೆ ನೀಡಲಾಗಿದೆ. ಸಾಧ್ಯ ವಾದರೆ ಗನ್ ಮ್ಯಾನ್ ಸಹ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಕೋಟನೂರ ಡಿಯಲ್ಲಿನ ಮನೆ ಮೇಲಿನ‌ ದಾಳಿ ಹಾಗೂ ಹಲ್ಲೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲಾಗಿದ್ದು, ಎಲ್ಲ‌ಮಾಹಿತಿ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಇದನ್ನೂ ಓದಿ: ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

Advertisement
Advertisement

Udayavani is now on Telegram. Click here to join our channel and stay updated with the latest news.

Next