Advertisement

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

06:26 PM May 16, 2024 | Team Udayavani |

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಉಪಾಧ್ಯಕ್ಷ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಸಿದರು.

Advertisement

ಜೂನ್ 3 ರಂದು ನಡೆಯುವ ಕ್ಷೇತ್ರದ ಚುನಾವಣೆಗೆ ಸಜ್ಜನ್ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ನ್ನು‌ ಮಾಜಿ ಎಂಎಲ್ಸಿ ಅಮರನಾಥ ಪಾಟೀಲ್ ಅವರಿಗೆ ಟಿಕೆಟ್ ನೀಡಿದ್ದಲ್ಲದೇ ನಾಮಪತ್ರ ಸಲ್ಲಿಕೆ ಕೊನೆ‌ ದಿನವಾದ ಗುರುವಾರ ನಾಮಪತ್ರ ಸಲ್ಲಿಸಿದ್ದರಿಂದ ಸಜ್ಜನ್ ಕೊನೆಗೂ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ನಿರ್ಧಾರದಿಂದ ಹಿಂದೆ ಸರಿಯುವಂತೆ ಗುರುವಾರ ಬೆಳಿಗ್ಗೆ ಸಜ್ಜನ್ ಅವರ ಮನೆಗೆ ಬಿಜೆಪಿ ಮುಖಂಡರು ಹೋಗಿ ಮನವೊಲಿಸಲು ಮುಂದಾದರೂ ಮಾತು ಕತೆ ಫಲಪ್ರಧವಾಗಲಿಲ್ಲ. ಹೀಗಾಗಿ ಸುರೇಶ ಸಜ್ಜನ ನಾಮಪತ್ರ ಸಲ್ಲಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಎನ್. ರವಿಕುಮಾರ್, ವಿಧಾನಸಭೆ ಮುಖ್ಯ ಸಚೇತಕ ದೊಡ್ಡ‌ನಗೌಡ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಹಾಗೂ ಇತರ ನಾಯಕರು ಸಜ್ಜನ್ ಅವರ ಮನವೋಲಿಸಲು‌ ಮುಂದಾದರು. ಆದರೆ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದು, ಹೀಗಾಗಿ ಹಿಂದೆ ಸರಿಯುವುದಿಲ್ಲ ಎಂದು ಸುರೇಶ ಸಜ್ಜನ್ ಸಂಧಾನಕ್ಕೆ ಬಂದ ಬಿಜೆಪಿ ಮುಖಂಡರಿಗೆ ತಿಳಿ ಹೇಳಿ ತದನಂತರ ತಮ್ಮ‌ ಉಮೇದುವಾರಿಕೆ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next