Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎನ್ಸಿಪಿಸಿಆರ್, ಕಲಬುರಗಿ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕಲಬುರಗಿ ವಿಭಾಗ ಮಟ್ಟದ ಆರು ಜಿಲ್ಲೆಗಳ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ವಿಚಾರಣೆ ಆರಂಭಕ್ಕೂ ಮುನ್ನ ಹಮ್ಮಿಕೊಳ್ಳಲಾಗಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಹಿಂದುಳಿದ ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತಂತೆ ವಿಚಾರಣೆ ನಡೆಸುತ್ತಿರುವುದು ನಿಜಕ್ಕೂ ಸಂತೋಷದ ವಿಷಯವಾಗಿದೆ. ಇದೊಂದು ಹೈ.ಕ ಭಾಗಕ್ಕೆ ಐತಿಹಾಸಿಕ ಕ್ಷಣವಾಗಿದೆ ಎಂದರು.
ಯಾದಗಿರಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಸಿಇಒಗಳಾದ ಡಾ| ಪಿ. ರಾಜಾ, ಕವಿತಾ ಎಸ್. ಮನ್ನಿಕೇರಿ, ಮಹಾಂತೇಶ ಬೀಳಗಿ, ಕಲಬುರಗಿ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಯಾದಗಿರಿ ಎಸ್ಪಿ ಋಷಿಕೇಶ ಭಗವಾನ್ ಸೋನಾವನೆ, ಅಪರ ಜಿಲ್ಲಾಧಿಕಾರಿಗಳಾದ ಬಿ. ಶರಣಪ್ಪ, ಡಾ| ರುದ್ರೇಶ, ಎಂ.ಸತೀಶ್ ಕುಮಾರ, ಸೈಯೀದಾ ಆಯಿಷಾ, ಹೆಚ್ಚುವರಿ ಎಸ್ಪಿಗಳಾದ ಎಸ್.ಬಿ. ಪಾಟೀಲ, ಸಂಗೀತಾ ಹಾಗೂ ಆರು ಜಿಲ್ಲೆಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಮಕ್ಕಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಮಕ್ಕಳು, ಪಾಲಕರು ಮತ್ತು ಸ್ವಯಂ ಸೇವಾ ಸಂಘದ ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.