Advertisement

ನೌಕರರ ಪಾದಯಾತ್ರೆ ತಡೆಗೆ ಖಂಡನೆ

12:24 PM Dec 12, 2019 | |

ಕಲಬುರಗಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಬೇಕೆಂದು ನಡೆಯುತ್ತಿರುವ ಪಾದಯಾತ್ರೆಗೆ ತಡೆ ನೀಡಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

Advertisement

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು, ಎಸ್‌ಎಫ್‌ಐ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ದಮನ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಸರ್ಕಾರಿ ಶಾಲೆಗಳ ಬದಲಿಗೆ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌
ಕೆಜಿ, ಯುಕೆಜಿ ಪ್ರಾರಂಭಿಸುವಂತೆ ಅಂಗನವಾಡಿ ನೌಕರರ ಪ್ರಬಲ ಒತ್ತಾಯವಾಗಿದೆ. ಹೀಗಾಗಿ ಬೆಂಗಳೂರಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತುಮಕೂರಿನಿಂದ ನೌಕರರು ಪಾದಯಾತ್ರೆ ಕೈಗೊಂಡಿದ್ದಾರೆ. ಆದರೆ, ಸರ್ಕಾರ ಮಾರ್ಗ ಮಧ್ಯದಲ್ಲೇ ಪಾದಯಾತ್ರೆಗೆ ತಡೆವೊಡ್ಡಿ ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮುಷ್ಕರದ ಬಗ್ಗೆ ಮೂರು ತಿಂಗಳ ಹಿಂದೆ ಮುಖ್ಯಮಂತ್ರಿಗಳ ಕಚೇರಿಗೆ ಪತ್ರ ತಲುಪಿಸಲಾಗಿದೆ. ಅಂಗನವಾಡಿ ನೌಕರರ ಬೇಡಿಕೆ ಈಡೇರಿಸುವುದು ಸರ್ಕಾರ ಮೂಲ ಕರ್ತವ್ಯವಾಗಿದೆ. ಬೇಡಿಕೆ ಈಡೇರಿಸುವುದು ಬಿಟ್ಟು ಪಾದಯಾತ್ರೆಗೆ ತಡೆದಿರುವುದು ಜನತಂತ್ರಕ್ಕೆ ಶೋಭೆತರುವಂತದ್ದಲ್ಲ.

ಸರ್ಕಾರದ ಕ್ರಮದಿಂದ ರಸ್ತೆಯಲ್ಲಿ ಚಳಿಗೆ ಅಂಗನವಾಡಿ ಕಾರ್ಯಕರ್ತೆಯರು ರಾತ್ರಿ ಕಳೆಯುವಂತೆ ಆಗಿದೆ. ಆದರೂ, ನೌಕರರು ತಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಯನ್ನು ಸರ್ಕಾರ ಈಡೇರಿಸಲೇಬೇಕು. ಇಲ್ಲವಾದಲ್ಲಿ ಹಲವು ಸಂಘಟನೆಗಳಿಂದ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಬೇಕಾಗುತ್ತಿದೆ ಎಂದು ಪ್ರತಿಭಟನನಿತರರು ಎಚ್ಚರಿಸಿದರು.

Advertisement

ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಶಾಂತಪ್ಪ ಪಾಟೀಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಗಂಗಮ್ಮ ಬಿರಾದಾರ, ಎಸ್‌ ಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಿದ್ದಲಿಂಗ ಪಾಳಾ, ತಾಲೂಕಾಧ್ಯಕ್ಷ ವಿಶ್ವನಾಥ ರಾಗಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next