Advertisement

ನೆಗೆಟಿವ್‌ ವರದಿ ಬಂದ ವಲಸಿಗರು ಮನೆಗೆ: ಡಾ|ಜಾಧವ

03:28 PM May 22, 2020 | Naveen |

ಕಲಬುರಗಿ: ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿ ಕಲಬುರಗಿ ಜಿಲ್ಲೆಯ ವಿವಿಧೆಡೆ ಸಾಂಸ್ಥಿಕ ಕ್ವಾರಾಂಟೈನ್‌ ನಲ್ಲಿರುವ ವಲಸಿಗರಲ್ಲಿ ಕೋವಿಡ್‌-19 ನೆಗೆಟಿವ್‌ ಬಂದಿರುವ ಕಾರ್ಮಿಕರನ್ನು ಅವರವರ ಮನೆಗೆ ಕಳಿಸಿ ಹೋಮ್‌ ಕ್ವಾರಂಟೈನ್‌ ಮಾಡಲಾಗುವುದು ಎಂದು ಸಂಸದ ಡಾ| ಉಮೇಶ ಜಾಧವರ ತಿಳಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್‌ಕುಮಾರ ಪಾಂಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಪಂಕಜ್‌ಕುಮಾರ ಪಾಂಡೆಯವರು ಜಿಲ್ಲಾ ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಸಾಂಸ್ಥಿಕ ಕ್ವಾರಂಟೈನ್‌ ನಲ್ಲಿರುವವರಲ್ಲಿ ಪಾಸಿಟಿವ್‌ ಬಂದಿರುವವರಿಗೆ ಇಎಸ್‌ಐಸಿ ಮತ್ತು ಜಿಮ್ಸ್‌ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಗೆಟಿವ್‌ ವರದಿ ಬಂದಿರುವವರು ಮನೆಗೆ ತೆರಳಬಹುದು. ಆದರೆ, ಆರೋಗ್ಯ ಇಲಾಖೆ ಸೂಚಿಸಿದಷ್ಟು ದಿನ ಕಡ್ಡಾಯವಾಗಿ ಹೋಮ್‌ ಕ್ವಾರಂಟೈನ್‌ನಲ್ಲಿರಬೇಕು. ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ವಲಸಿಗರಿಗೆ ಅವರು ಸಲಹೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next