Advertisement

ಹಾಡಹಗಲೇ ಮಾರಾಕಾಸ್ತ್ರದಿಂದ ಕೊಚ್ಚಿ ಜಿ.ಪಂ ಮಾಜಿ ಸದಸ್ಯನ ಸಹೋದರನ ಕೊಲೆ

07:03 PM Jun 08, 2021 | Team Udayavani |

ಕಲಬುರಗಿ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಅವರ ಸಹೋದರರೊಬ್ಬರನ್ನು ಹಾಡಹಗಲೇ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ.

Advertisement

ಹಣಮಂತ ಚಂದ್ರಶ್ಯಾ ಕೂಡಲಗಿ (40) ಎಂಬುವವರೇ ಕೊಲೆಯಾದವರು. ಜೇವರ್ಗಿ ತಾಲೂಕಿನ ಮಯೂರ ಗ್ರಾಮದಿಂದ ಕಲಬುರಗಿ ನಗರಕ್ಕೆ ಇನ್ನೋವಾ ಕಾರಿನಲ್ಲಿ ಬರುತ್ತಿದ್ದಾಗ ಸಂಜೆ 4.30ರ ಸುಮಾರಿಗೆ ಬಳ್ಳುಂಡಗಿ ಸಮೀಪ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಹಣಮಂತ ಅವರನ್ನು ಹತ್ಯೆ ಮಾಡಿದ್ದಾರೆ.

ದಾಳಿಯಿಂದ ಹಣಮಂತ ಅವರ ತಲೆಯ ಭಾಗ ಛಿದ್ರವಾಗಿದೆ. ಕೊಲೆಯಾದ ಹಣಮಂತ ಕಾಂಗ್ರೆಸ್ ಮುಖಂಡರಾದ ಜಿಪಂ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ರವರ ಕಿರಿಯ ಸಹೋದರರಾಗಿದ್ದಾರೆ. ಎರಡು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣಕ್ಕೆ ಪ್ರತೀಕಾರವಾಗಿ ಈ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ‌

ಇದನ್ನೂ ಓದಿ :ಡೆಲ್ಟಾ ರೂಪಾಂತರಿ ಸೋಂಕಿನಿಂದ ರಕ್ತ ಹೆಪ್ಪುಗಟ್ಟುವಿಕೆಯ ಲಕ್ಷಣಗಳು ಪತ್ತೆ : ಅಧ್ಯಯನ

2019ರ ನವೆಂಬರ್‌ನಲ್ಲಿ ಮಯೂರ ಗ್ರಾಮದ ಬಿಜೆಪಿ ಮುಖಂಡ ಶಿವಲಿಂಗ ಭಾವಿಕಟ್ಟಿ ಅವರ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಶಾಂತಪ್ಪ ಮತ್ತು ಹಣಮಂತ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು.‌ ಇಬ್ಬರೂ ಕೂಡ ಜೈಲು ಸೇರಿ ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

Advertisement

ಈಗ ಮಯೂರ ಗ್ರಾಮದವರೇ ಹಣಮಂತ ಕೂಡಲಗಿಯವರ ಕೊಲೆ ಮಾಡಿರುವ ಮಾಹಿತಿ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ತಾಯಪ್ಪ ದೊಡ್ಡಮನಿ, ಜೇವರ್ಗಿ ಸಿಪಿಐ ಶಿವಪ್ರಸಾದ್, ನೆಲೋಗಿ ಪಿಎಸ್‌ಐ ರಾಜಕುಮಾರ ಜಮಗೊಂಡ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next