Advertisement

CUK: ಅನ್ಯಾಯದ ವಿರುದ್ಧ ಸತ್ಯಾಗ್ರಹ ನಿರತ ವಿದ್ಯಾರ್ಥಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

10:37 PM Apr 15, 2023 | sudhir |

ಕಲಬುರಗಿ: ಇಲ್ಲಿನ ಕೇಂದ್ರೀಯ ವಿಶ್ವ ವಿದ್ಯಾಲಯದ ಸಂಶೋಧನಾ ವಿಭಾಗದ ವಿದ್ಯಾರ್ಥಿ ನಂದಪ್ಪ ತನ್ನ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳು ಮತ್ತು ವಿಚಾರಣೆ ಹೆಸರಲ್ಲಿ ನೀಡುತ್ತಿರುವ ಮಾನಸಿಕ ಕಿರುಕುಳ ನಿಲ್ಲಿಸಬೇಕೆಂದು ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಿರತ ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದಾರೆ.

Advertisement

ನಂದಪ್ಪ ಅಸ್ವಸ್ಥಗೊಂಡ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಕಡಗಂಚಿ ಕೇಂದ್ರೀಯ ವಿಶ್ವ ವಿದ್ಯಾಲಯದ ಆಡಳಿತ ಸೌಧದಲ್ಲಿ ತನಗಾದ ಅನ್ಯಾಯದ ವಿರುದ್ಧ ಸತ್ಯಾಗ್ರಹ ನಡೆಸಿದ್ದಾರೆ.

ಹಲವಾರು ಸಂಘಟನೆಗಳು ಬೆಂಬಲ ನೀಡಿದ್ದವು. ಈ ಮಧ್ಯೆ ವಿವಿ ಆಡಳಿತ ಮಂಡಳಿ ಸತ್ಯಾಗ್ರಹ ವಿದ್ಯಾರ್ಥಿಯ ಗೋಳು ಕೇಳಲು ತಯಾರಿಲ್ಲದೆ ಇರುವುದರಿಂದ ಸಮಸ್ಯೆ ತಾರಕಕ್ಕೆ ಏರಿದೆ.

ಅಸ್ವಸ್ಥ ವಿದ್ಯಾರ್ಥಿ ನಂದಪ್ಪನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Kalaburagi; ಒಂದೇ ದಿನ ಹೃದಯಾಘಾತದಿಂದ ಕೊನೆಯುಸಿರೆಳೆದ ಅಣ್ಣ-ತಮ್ಮ!

Advertisement
Advertisement

Udayavani is now on Telegram. Click here to join our channel and stay updated with the latest news.

Next