Advertisement

ಕಾಳಹಸ್ತಿ ದೇಗುಲದಲ್ಲಿ ಅಗ್ನಿ ಆಕಸ್ಮಿಕ: ಗಂಭೀರ ಹಾನಿ ಇಲ್ಲ

03:45 AM Feb 05, 2017 | Team Udayavani |

ಚಿತ್ತೂರು: ದಕ್ಷಿಣ ಭಾರತದ ಪ್ರಮುಖ ಯಾತ್ರಾ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀಕಾಳಹಸ್ತಿ ದೇಗುಲದಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ಫೆ.8ರಂದು ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅದಕ್ಕೆ ಪೂರಕವಾಗಿ ಶನಿವಾರ ಯಾಗ ಶಾಲೆಯಲ್ಲಿ ಹೋಮ ಹವನಗಳು ನಡೆಯುತ್ತಿದ್ದವು. 

Advertisement

ಈ ಸಂದರ್ಭದಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ಸುದ್ದಿ ತಿಳಿದು ಪೊಲೀಸರು ಮತ್ತು ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದರು. ಯಾರಿಗೂ ಗಂಭೀರ ಪ್ರಮಾಣದ ಗಾಯಗಳಾಗದಿದ್ದರೂ ಯಾಗ ಶಾಲೆಯಲ್ಲಿ ಧಾರ್ಮಿಕ ಕ್ರಿಯಾಭಾಗಗಳನ್ನು ನಡೆಸುತ್ತಿದ್ದವರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ಸಂಭವಿಸಿರುವ ಸಾಧ್ಯತೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next