Advertisement

ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ರೈತ ಸಾವು:ಕರಕಲಾಗಿ ಬೇರ್ಪಟ್ಟ ರುಂಡ!

10:21 AM Apr 19, 2021 | Team Udayavani |

ಚಾಮರಾಜನಗರ: ಜಮೀನಿನಲ್ಲಿ ಹಾದು ಹೋಗಿದ್ದ 11 KV ಹೈಟೆನ್ಷನ ವಿದ್ಯುತ್ ತಂತಿಗೆ ಸಿಲುಕಿ ರೈತನೋರ್ವ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಾಳನಹುಂಡಿ ರಸ್ತೆಯ ಕಟ್ಟೇಪುರ ಬಳಿಯ ಜಮೀನೊಂದರಲ್ಲಿ ನಡೆದಿದೆ.

Advertisement

ಭಾನುವಾರ ರಾತ್ರಿ 9.30ರ ಸುಮಾರಿಗೆ ವೇಲುಸ್ವಾಮಿ (55 ವ) ಎಂಬ ರೈತ ಜಮೀನಿನಲ್ಲಿ ನೀರು ಎತ್ತುವ ಮೋಟಾರ್ ಸ್ವಿಚ್ ಆನ್ ಮಾಡಲು ಹೋಗಿದ್ದಾರೆ. ಪಕ್ಕದಲ್ಲೇ ಹಾದುಹೋಗಿರುವ 11 ಕೆವಿ ವಿದ್ಯುತ್ ತಂತಿ ತುಂಡಾಗಿ ನೇತಾಡುತ್ತಿತ್ತು. ಕತ್ತಲೆಯಲ್ಲಿ ಇದನ್ನು ಗಮನಿಸದೇ, ಅವರ ತಲೆಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ರುಂಡ ಸುಟ್ಟು ಕರಕಲಾಗಿ ತಂತಿಗೇ ಅಂಟಿಕೊಂಡಿದೆ. ರುಂಡ-ಮುಂಡ ಬೇರೆಯಾಗಿ ಬಿದ್ದಿವೆ. ತಲೆ ಮೂರು ಅಡಿ ಎತ್ತರದ ಲೈನ್ ನಲ್ಲಿ ಸಿಲುಕಿ ನೇತಾಡುತ್ತಿದ್ದರೆ, ದೇಹ ಕೆಳಗಿ ಬಿದ್ದಿದೆ.

ಇದನ್ನೂ ಓದಿ:ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

ಸ್ಥಳಕ್ಕೆ ಸೆಸ್ಕ್ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದಾರೆ.

ಜಮೀನುಗಳಲ್ಲಿ ಹಾದು ಹೋಗಿರುವ ಹೈಟೆನ್ಷನ್ ವಿದ್ಯುತ್ ತಂತಿಗಳು ನೇತಾಡುತ್ತಿದ್ದರೂ ಅದನ್ನು ನಿರ್ವಹಣೆ ಮಾಡಿ ಎತ್ತಿ ಬಿಗಿ ಮಾಡದ ಕಾರಣ ಇಂಥ ಅವಘಡಗಳು ಸಂಭವಿಸುತ್ತಿದ್ದು, ಘಟನೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳಬೇಕು. ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next