Advertisement

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

01:34 PM Jun 01, 2023 | Team Udayavani |

ಚಿಕ್ಕಮಗಳೂರು: “ವೈದ್ಯೋ ನಾರಾಯಣೋ ಹರಿಃ” ಎಂಬ ಮಾತಿಗೆ. ಆದರೆ ತನ್ನ ಬಳಿ ಚಿಕಿತ್ಸೆಗೆಂದು ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಬೇಕಾದ ವೈದ್ಯರೊಬ್ಬರು ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

Advertisement

ಕಳಸ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡದಿದೆ. ವೈದ್ಯ ಬಾಲಕೃಷ್ಣ ಅವರು ಕಂಠಪೂರ್ತಿ ಕುಡಿದು ಆಸ್ಪತ್ರೆಯ ಬೆಡ್ ನಲ್ಲಿ ಮಲಗಿದ್ದಾರೆ.

ಇದನ್ನೂ ಓದಿ:ಫೇಸ್‌ಬುಕ್‌ನಲ್ಲಿ ಪೀಠೊಪಕರಣ ಮಾರಲು ಹೋದ ವ್ಯಕ್ತಿಗೆ 98 ಸಾವಿರ ರೂ. ವಂಚನೆ

ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಹರಣ ಆಪರೇಷನ್ ಕ್ಯಾಂಪ್ ಏರ್ಪಾಡು ಮಾಡಲಾಗಿತ್ತು. ಮಹಿಳೆಯರಿಗೆ ಬೆಳಗ್ಗೆ 8 ಗಂಟೆಗೆ ಬರಲು ಹೇಳಿದ್ದರು. 10ಕ್ಕೂ ಹೆಚ್ಚು ಮಹಿಳೆಯರು ಮಕ್ಕಳನ್ನ ಬಿಟ್ಟು ಬೆಳಗ್ಗೆ 8 ಗಂಟೆಗೆ ಬಂದಿದ್ದರು. ಆದರೆ 8 ಗಂಟೆಗೆ ಬರಬೇಕಾಗಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಬಾಲಕೃಷ್ಣ ಬಂದಿದ್ದು 3 ಗಂಟೆಗೆ. ಬರುವಾಗಲೇ ವೈದ್ಯ ಬಾಲಕೃಷ್ಣ ಕಂಠಪೂರ್ತಿ ಕುಡಿದು ಬಂದು ಸಂತಾನಹರಣ ಚಿಕಿತ್ಸೆ ಮಾಡಬೇಕಾದ ಆಪರೇಷನ್ ಹಾಸಿಗೆ ಮೇಲೆ ಮಲಗಿದ್ದಾರೆ.

ಇದನ್ನು ಅನಸ್ತೇಸಿಯಾ ತೆಗೆದುಕೊಂಡು ಮಲಗಿದ್ದ ಮಹಿಳೆಯರ ಸಂಬಂಧಿಗಳು ಸಿಟ್ಟಾಗಿದ್ದು, ವೈದ್ಯರ ವಿರುದ್ಧ ಕೂಗಾಡಿದ್ದಾರೆ.

Advertisement

ಸಿಬ್ಬಂದಿ ಡ್ರಾಮಾ: ಕುಡಿದು ಬಂದ ವೈದ್ಯರಿಗೆ ಶುಗರ್ ನಾಟಕವಾಡಿದ ಆಸ್ಪತ್ರೆ ಸಿಬ್ಬಂದಿ ಎಸ್ಕೇಪ್ ಮಾಡಿಸಿದ್ದಾರೆ. ವೈದ್ಯರಿಗೆ ಏನೋ ಆಗಿದೆ, ಶುಗರ್ ಕಡಿಮೆಯಾಗಿದೆ, ಬಿಪಿ ಜಾಸ್ತಿ ಆಗಿದೆಯೆಂದು ಹೈ ಡ್ರಾಮಾ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next