Advertisement

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

01:51 PM May 15, 2024 | Team Udayavani |

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಬಿಜೆಪಿ‌ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ಪಂ‌ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ಸುರೇಶ ಸಜ್ಜನ್ ಟಿಕೆದ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.‌

Advertisement

ಬಿಜೆಪಿ ಟಿಕೆಟ್ ಮಾಜಿ ಎಂಎಲ್ ಸಿ ಅಮರನಾಥ ಪಾಟೀಲ್ ಸಿಕ್ಕಿದ್ದಕ್ಕೆ ಅಸಮಾಧಾನಗೊಂಡಿರುವ ಸಜ್ಜನ್ ಬಂಡಾಯ ಅಭ್ಯರ್ಥಿ ಯಾಗಿ ಕಣಕ್ಕೀಳಿಯಲು ನಿರ್ಧರಿಸಿದ್ದಾರೆ.‌

ನಾಮಪತ್ರ ಸಲ್ಲಿಕೆ ಕೊನೆ ದಿನದಂದೇ ಅಮರನಾಥ ಪಾಟೀಲ್ ಬಿಜೆಪಿ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸುತ್ತಿದ್ದು, ಇದೇ ಸಮಯಕ್ಕೆ ಸಜ್ಜನ ಸಹ ನಾಮಪತ್ರ ಸಲ್ಲಿಸುತ್ತಿದ್ದಾರೆ.‌

ಟಿಕೆಟ್ ಸಿಗದಿದ್ದಕ್ಕೆ ಜಿ.ಪಂ ಮಾಜಿ ಉಪಾಧ್ಯಕ್ಷ, ಮುಖಂಡ ಸುರೇಶ ಸಜ್ಜನ್ ಬಂಡಾಯ ಅಭ್ಯರ್ಥಿ ಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಮೇ. 16 ರಂದು ಬೆಂಬಲಿಗರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ನಾಮಪತ್ರ ಸಲ್ಲಿಸಲಿರುವ ಸಜ್ಜನ್.

ಚುನಾವಣೆಗೆ ಕಳೆದ ನಾಲ್ಕು ವರ್ಷಗಳಿಂದ ಸಿದ್ದತೆ ಮಾಡಿಕೊಳ್ಳ ಲಾಗಿದೆ. ತಮಗೆ ಟಕೆಟ್ ದೊರಕುವ ಬಗ್ಗೆ ದೃಢ ವಿಶ್ವಾಸ ಹೊಂದಲಾಗಿತ್ತು. ಆದರೆ ವರಿಷ್ಠರು ಮತ್ತೆ ಅಮರನಾಥ ಪಾಟೀಲ್ ಅವರಿಗೆ ಮತ್ತೆ ಮಣೆ ಹಾಕಿದ್ದರಿಂದ ಬಂಡಾಯ ಅಭ್ಯರ್ಥಿ ಯಾಗಿ ಕಣಕ್ಕೀಳಿಯಲಾಗುತ್ತಿದೆ ಎಂದು ಸಜ್ಜನ್ ಉದಯವಾಣಿ ಗೆ ತಿಳಿಸಿದ್ದಾರೆ.

Advertisement

ಇದನ್ನೂ ಓದಿ: ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

Advertisement

Udayavani is now on Telegram. Click here to join our channel and stay updated with the latest news.

Next