Advertisement

ಕಲಬುರ್ಗಿ ಹತ್ಯೆ ಪ್ರಕರಣ: ಆರೋಪಿಗಳು ಸಿಐಡಿ ವಶಕ್ಕೆ

06:50 AM Sep 16, 2018 | Team Udayavani |

ಧಾರವಾಡ: ಎಸ್‌ಐಟಿ ವಶದಲ್ಲಿದ್ದ ಇಬ್ಬರು ಆರೋಪಿಗಳನ್ನು ಸಂಶೋಧಕ ಡಾ|ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ವಿಚಾರಣೆ ನಡೆಸಲು 14 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡದ 3ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯ ಪುರಸ್ಕರಿಸಿದೆ. 

Advertisement

ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ಎಸ್‌ಐಟಿ ಪೊಲೀಸರಿಂದ ಬಂ ಧಿಸಲ್ಪಟ್ಟಿರುವ ಗಣೇಶ ಮಿಸ್ಕಿನ್‌ ಹಾಗೂ ಅಮಿತ್‌ ಬದ್ದಿ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಕರೆದುಕೊಂಡು ಬಂದ ಸಿಐಡಿ ಪೊಲೀಸರು, ಇಲ್ಲಿನ ಮೂರನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮುಂದೆ ಶನಿವಾರ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತಿಗೊಂಡ ನ್ಯಾಯಾ ಧೀಶರಾದ ಮಮತಾ ಡಿ. ಅವರು, ಸಿಐಡಿ ಅಧಿ ಕಾರಿಗಳಿಗೆ ಕೆಲ ಷರತ್ತುಗಳನ್ನು ಹಾಕುವ ಮೂಲಕ ಇಬ್ಬರೂ ಆರೋಪಿಗಳನ್ನು ಸೆ.28 ರವರೆಗೆ ವಶಕ್ಕೆ ನೀಡಿ ಆದೇಶ ಹೊರಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next