Advertisement

Kalladka: ಕಾರಿಗೆ ಹಿಂಬದಿಯಿಂದ ಲಾರಿ ಢಿಕ್ಕಿ; ಚಾಲಕ ಸಹಿತ ಪ್ರಯಾಣಿಕರು ಪಾರು

09:18 PM Sep 10, 2023 | Team Udayavani |

ಬಂಟ್ವಾಳ: ರಾ.ಹೆ.75ರ ಕಲ್ಲಡ್ಕದಲ್ಲಿ ಹಿಂಬದಿಯಿಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ರವಿವಾರ ನಡೆದಿದೆ.

Advertisement

ಮಹಾಲಿಂಗ ಭಟ್‌ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಕಂಪೆನಿಯ ಲಾರಿ ಢಿಕ್ಕಿ ಹೊಡೆದಿದೆ.

ಘಟನೆಯಿಂದ ಕಾರು ಜಖಂಗೊಂಡಿರುವ ಜತೆಗೆ ಎರಡು ಟಯರ್‌ಗಳು ಒಡೆದು ಹೋಗಿದ್ದು, ಕಾರು ಚಾಲಕ ಸಹಿತ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ.

ಕಾರು ಉಡುಪಿಯಿಂದ ಬೆಂಗಳೂರು ಭಾಗಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next