Advertisement

ಕಲ್ಲೇಶ್ವರ ದೇವಸ್ಥಾನದ ಗೋಪುರದ ಸ್ಥೂಪ ಧ್ವಂಸ: ನಿಧಿ ಆಸೆಗೆ ಕೃತ್ಯ ಶಂಕೆ

03:16 PM Oct 31, 2021 | Team Udayavani |

ಬಳ್ಳಾರಿ: ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕು ಹಿರೇಹಡಗಲಿ ಗ್ರಾಮದಲ್ಲಿರುವ ಪುರಾತತ್ವ ಇಲಾಖೆಗೆ ಸಂಬಂಧ ಪಟ್ಟ ಶ್ರೀ ಕಲ್ಲೇಶ್ವರ ದೇವಸ್ಥಾನದ ಗೋಪುರದ ಸ್ಥೂಪವನ್ನು (ಕಳಸ) ಧ್ವಂಸಗೊಳಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

Advertisement

ನಿಧಿ ಆಸೆಗೆ ಶಂಕೆ: ಭಾನುವಾರ ಬೆಳಿಗ್ಗೆ ಸಾರ್ವಜನಿಕರು ವಾಯು ವಿಹಾರಕ್ಕೆಂದು ದೇವಸ್ಥಾನದ ಬಳಿ ತೆರಳಿದಾಗ ಕೃತ್ಯ ನಡೆದಿರುವುದು ಗಮನಕ್ಕೆ ಬಂದಿದೆ.

ಶ್ರೀ ಕಲ್ಲೇಶ್ವರ ದೇವಸ್ಥಾನ ವನ್ನು ಕಲ್ಯಾಣಿ ಚಾಲುಕ್ಯರ ಕಾಲದಲ್ಲಿ ಕ್ರಿ.ಶ 1057 ನಿರ್ಮಾಣ ಮಾಡಿರುವುದಾಗಿ ದಾಖಲೆಗಳು ತಿಳಿಸುತ್ತವೆ.

ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next