Advertisement

Missing ಕಲ್ಲುಗುಂಡಿ : ವ್ಯಕ್ತಿ ನಾಪತ್ತೆ ಪೊಲೀಸ್ ದೂರು

10:55 PM Aug 19, 2023 | Team Udayavani |

ಅರಂತೋಡು: ಸಂಪಾಜೆ ಗ್ರಾಮದ ಕಲ್ಲುಗುಂಡಿ ಮೂಲದ ಕಿರಣ್‌ ಕ್ರಾಸ್ತಾ (33 ) ಆ. 8ರಂದು ಕಾಣೆಯಾಗಿದ್ದು, ಅವರನ್ನು ಹುಡುಕಿ ಕೊಡುವಂತೆ ಮನೆಯವರು ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ.

Advertisement

ಕಾಣೆಯಾಗಿರುವ ವ್ಯಕ್ತಿ ಈ ಮೊದಲು ಬೆಂಗಳೂರು ಮೊದಲಾದ ಕಡೆಗಳಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯಕ್ಕೆ ಬಂದಿದ್ದು ಸುಳ್ಯದ ಹೊಟೇಲ್‌ ಒಂದರಲ್ಲಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ.

ಇದೀಗ ಅವರು ಕಾಣೆಯಾಗಿ ಒಂದು ವಾರ ಕಳೆದರೂ ಎಲ್ಲಿಯೂ ಪತ್ತೆಯಾಗದ ಕಾರಣ ಮನೆಯವರು ದೂರು ನೀಡಿದ್ದಾರೆ. ಈ ವ್ಯಕ್ತಿಯನ್ನು ಕಂಡುಬಂದಲ್ಲಿ ಪೊಲೀಸ್‌ ಠಾಣೆಗೆ ತಿಳಿಸುವಂತೆ ಸುಳ್ಯ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next