Advertisement

ಕಲ್ಲುಗುಂಡಿ: ದಾಖಲೆ ಇಲ್ಲದ ಹಣ ವಶ

11:17 PM Apr 11, 2023 | Team Udayavani |

ಅರಂತೋಡು : ಚುನಾವಣಾಧಿಕಾರಿಗಳು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿಯಿಂದ ವರದಿಯಾಗಿದೆ.

Advertisement

ಬ್ಯಾಂಕ್‌ವೊಂದು ತನ್ನ ಎಟಿಎಂಗೆ ಹಣ ತುಂಬಿಸಲು ಲಕ್ಷಾಂತರ ರೂ. ಹಣವನ್ನು ಸಾಗಿಸುತ್ತಿತ್ತು. ಇದನ್ನು ಕಲ್ಲುಗುಂಡಿಯ ಚೆಕ್‌ ಪೋಸ್ಟ್ ಬಳಿ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ತಡೆಹಿಡಿದಿದ್ದಾರೆ. ಹಣ ಸಾಗಿಸಲು ಅನುಮತಿ ಪಡೆದುಕೊಂಡಿರುವ ದಾಖಲೆಗಳನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಆದರೆ ಅಲ್ಲಿ ಸರಿಯಾದ ದಾಖಲೆಗಳು ಇಲ್ಲದಿರುವುದರಿಂದ ಎಟಿಎಂ ಹಣ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮೇಲಾಧಿಕಾರಿಗಳು ಬಂದು ಕೊನೆಗೆ ಎಟಿಎಂ ಹಣ ಸಾಗಿಸುತ್ತಿದ್ದ ವಾಹನವನ್ನು ಸುಳ್ಯಕ್ಕೆ ಕರೆ ತರಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next