Advertisement

ಕಲ್ಸಂಕ: ಅಪಾಯ ಆಹ್ವಾನಿಸುತ್ತಿರುವ ಸರಳುಗಳು: ದುರಸ್ತಿಗೆ ಆಗ್ರಹ

12:06 AM Feb 24, 2021 | Team Udayavani |

ಉಡುಪಿ: ಕಲ್ಸಂಕ ರಾಷ್ಟ್ರೀಯ ಹೆದ್ದಾರಿ ಬಳಿ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳವನ್ನು ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ಕಾಂಕ್ರೀಟ್‌ ರಸ್ತೆಯ ಜಲ್ಲಿ ಕಲ್ಲುಗಳೆಲ್ಲ ಕಿತ್ತುಹೋಗಿದ್ದು, ರಸ್ತೆಯ ಒಳಗಿದ್ದ ಕಬ್ಬಿಣದ ಸರಳುಗಳು ಮೇಲೆದ್ದು ಅಪಾಯವನ್ನು ಆಹ್ವಾನಿಸುತ್ತಿದೆ.

Advertisement

ಈ ಮುಖ್ಯ ರಸ್ತೆಯಲ್ಲಿ ನಸುಕಿನ ಜಾವ ವಾಯು ವಿಹಾರಿಗಳು, ಯಾತ್ರಿಕರು, ಪಾದಚಾರಿಗಳು, ಸಂಚರಿಸುತ್ತಿರುತ್ತಾರೆ. ಕಂಬಿಗಳು ಕಾಲಿಗೆ ತಾಗಿ ಪಾದಚಾರಿಗಳು ಎಡವಿಬಿದ್ದು ಗಾಯಾಳುಗಳಾದ ಘಟನೆಗಳು ಇಲ್ಲಿ ನಡೆದಿವೆ.

ನಗರಾಡಳಿತ ತತ್‌ಕ್ಷಣ ದುರಂತ ಆಹ್ವಾನಿಸುವ ಸ್ಥಳದಲ್ಲಿರುವ ಕಬ್ಬಿಣದ ಸರಳುಗಳನ್ನು ಕತ್ತರಿಸುವಂತೆ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್‌ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next