Advertisement

ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟಗಾರರ ಮೆರವಣಿಗೆ

03:15 PM Sep 17, 2022 | Team Udayavani |

ಯಡ್ರಾಮಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ತಾಲೂಕಿನ ಅರಳಗುಂಡಗಿ ಗ್ರಾಮದಿಂದ ಕಲಬುರಗಿ ಶ್ರೀ ಶರಣಬಸವೇಶ್ವರ ದೇವಸ್ಥಾನದ ವರೆಗೆ ಹಮ್ಮಿಕೊಳ್ಳಲಾಗಿದ್ದ ದೇಶಭಕ್ತಿ ರಥಯಾತ್ರೆಗೆ ಶುಕ್ರವಾರ ಬೆಳಗ್ಗೆ ತಾಲೂಕಿನ ಆರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಬಳಿ ನಿರಗುಡಿ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಹಾರಾಜರು ಚಾಲನೆ ನೀಡಿದರು.

Advertisement

ಈ ರಥಯಾತ್ರೆಯಲ್ಲಿ ನೂರಾರು ವಾಹನಗಳಲ್ಲಿ ಸುತ್ತಲಿನ ಗ್ರಾಮದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಥಯಾತ್ರೆಯಲ್ಲಿ ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮೆರವಣಿಗೆ ಮಾಡಿದ್ದು ರಥಯಾತ್ರೆ ವಿಶೇಷವಾಗಿತ್ತು.

ಪೂಜ್ಯ ಶ್ರೀ ಬಲವಂತ ಶರಣರು, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಗುನ್ನಾಪೂರ, ಜಿಲ್ಲಾ ಹೋರಾಟಗಾರ ಎಂ.ಎಸ್‌.ಪಾಟೀಲ ನರಿಬೋಳ, ಜಯ ಕರ್ನಾಟಕ ಸಂಘಟನೆ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ಬಸವರಾಜಗೌಡ ಮಾಲಿಪಾಟೀಲ, ರೇವಣಸಿದ್ಧಪ್ಪಗೌಡ ಕಮಾನಮನಿ, ಎಸ್‌. ಎನ್‌.ದಾದಾಗೋಳ, ಜಯ ಕರ್ನಾಟಕ ಸಂಘಟನೆ ಜೇವರ್ಗಿ ತಾಲೂಕು ಘಟಕದ ಅಧ್ಯಕ್ಷ ಸುಧೀಂದ್ರ ಇಜೇರಿ, ಯಡ್ರಾಮಿ ತಾಲೂಕು ಘಟಕದ ಅಧ್ಯಕ್ಷ ಚಂದ್ರು ಮಲ್ಲಾಬಾದ, ಸಂತೋಷ ಘತ್ತರಗಿ, ಪ್ರಕಾಶ ಪಾಟೀಲ,ಮಡಿವಾಳಪ್ಪಗೌಡ ಮಾಲಿಪಾಟೀಲ, ಮಾಳು ಪೂಜಾರಿ, ಅಂಬರೀಶ ಇಸಾಂಪೂರ, ಈರಣ್ಣಗೌಡ ಪಾಟೀಲ, ಸಿದ್ಧು ಇಜೇರಿ, ತಾಯಪ್ಪ ನಾಯಕ, ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next