Advertisement

ಐಸಿಯುಗೆ ದಾಖಲಾದ ಉ.ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್

07:55 AM Jul 05, 2021 | Team Udayavani |

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಅನಾರೋಗ್ಯ ಕಾಡಿದ್ದು, ಅವರನ್ನು ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.

Advertisement

ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅವರಿಗೆ ಕಳೆದ ಎರಡು ವಾರಗಳಿಂದ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ. ಅವರನ್ನು ಶನಿವಾಋ ಲಕ್ನೋದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ರವಿವಾರ ಸಂಜೆ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಯಿತು.

ಕಲ್ಯಾಣ್ ಸಿಂಗ್‌ ಚಿಕಿತ್ಸೆ ನೀಡಲು ನೆಫ್ರಾಲಜಿ, ಕಾರ್ಡಿಯಾಲಜಿ, ನ್ಯೂರಾಲಜಿ, ಎಂಡೋಕ್ರೈನಾಲಜಿ ಮತ್ತು ನ್ಯೂರೋ-ಓಟಾಲಜಿ ವಿಭಾಗಗಳ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಕಲ್ಯಾಣ್ ಸಿಂಗ್ ಅವರು ಇಲ್ಲಿಗೆ ಬಂದಾಗ, ಅವರ ರಕ್ತದೊತ್ತಡ ಮತ್ತು ಹೃದಯ ಬಡಿತಗಳು ಸಾಮಾನ್ಯವೆಂದು ಕಂಡುಬಂದವು, ಆದರೆ ಪ್ರಜ್ಞೆಯ ಮಟ್ಟವು ಸ್ವಲ್ಪ ಕಡಿಮೆಯಾಗಿತ್ತು. ಅವರನ್ನು ಐಸಿಯುಗೆ ದಾಖಲಿಸಲಾಗಿದೆ” ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂಓದಿ:ಎಚ್ಚರ ತಪ್ಪಿದರೆ ಮತ್ತೆ ಲಾಕ್‌: ಸಚಿವರಿಂದ ಎಚ್ಚರಿಕೆ, ವೈದ್ಯರಿಂದಲೂ ಸಲಹೆ

Advertisement

ಬಿಜೆಪಿ ನಾಯಕನ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ತಿಳಿದ ನಂತರ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಅವರು ಭಾನುವಾರ ಡಾ.ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next