Advertisement
ಬೆಂಗಳೂರಿನಲ್ಲಿಂದು ಕಲ್ಯಾಣ ಕರ್ನಾಟಕದ ಶಾಸಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ 19 ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ಅಡ್ಡಿಯಾಗಿತ್ತು. ಈಗ ತುರ್ತಾಗಿ ನೇಮಕಾತಿಗೆ ಚಾಲನೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
Related Articles
Advertisement
ಕಲ್ಯಾಣ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸೂಕ್ತ ಅನುದಾನ ಕಲ್ಪಿಸಿ ಅಭಿವೃದ್ಧಿ ವೇಗ ಚುರುಕುಗೊಳಿಸಲಾಗುವುದು. ಅದೇ ರೀತಿ ಕುಡಿಯುವ ನೀರಿನ ಹಾಗೂ ವಸತಿ ಸಮಸ್ಯೆ ಅಧ್ಯತೆ ಮೇರೆಗೆ ನಿವಾರಿಸಲಾಗುವುದು. ಒಟ್ಟಾರೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ದ ವಿದೆ. ಎಲ್ಲ ಶಾಸಕರು ಒಗ್ಗೂಡಿ ಕೆಲಸ ಮಾಡಿದಲ್ಲಿ ಅಭಿವೃದ್ಧಿ ವೇಗ ಮತ್ತಷ್ಟು ವೇಗಗೊಳ್ಳುತ್ತದೆ ಎಂದು ಸಿಎಂ ಕಿವಿ ಮಾತು ಹೇಳಿದರಲ್ಲದೇ ಮತ್ತೆ ಮೂರು ತಿಂಗಳೊಳಗೆ ಈ ತರಹ ಶಾಸಕರ ಸಭೆ ನಡೆಸುವುದಾಗಿ ಹೇಳಿದರು.
ಇದನ್ನೂ ಓದಿ:ಶಿಕ್ಷಕಿಗೆ ಕೋವಿಡ್ ಪಾಸಿಟಿವ್ : ಶಾಲೆಗೆ ಸ್ಯಾನಿಟೈಸ್ ಮಾಡಿ ಶಾಲಾರಂಭಿಸಲು DDPI ಸೂಚನೆ
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರು ಹಾಗೂ ಸೇಡಂ ಶಾಸಕರು ಮತ್ತು ವಿಭಾಗೀಯ ಪ್ರಭಾರಿ ರಾಜಕುಮಾರ ಪಾಟೀಲ್ ಸಭೆಯಲ್ಲಿ ಮಾತನಾಡಿ, ಕಲ್ಯಾಣ ಕರ್ನಾಟಕದ ಬೇಡಿಕೆಗಳ ಕುರಿತಾಗಿ ಪ್ರಸ್ತಾವನೆಗಳನ್ನು ಮಂಡಿಸಿದರಲ್ಲದೇ ಕಲ್ಯಾಣ ಕರ್ನಾಟಕ ಶಾಸಕರ ಸಭೆ ನಡೆಸಿದ್ದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲು ಅವರನ್ನು ಅಭಿನಂದಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಅಶ್ವಥ್ ನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಆರ್ ಅಶೋಕ, ವಿ. ಸೋಮಣ್ಣ ಸೇರಿದಂತೆ ಕಲ್ಯಾಣ ಕರ್ನಾಟಕದ ಎಲ್ಲ ಶಾಸಕರು ಪಾಲ್ಗೊಂಡಿದ್ದರು.