Advertisement

ನಗರದಲ್ಲಿ ಕಮಲ ಜ್ಯೋತಿ ಸಂಕಲ್ಪ

06:00 AM Feb 27, 2019 | |

ಬೆಂಗಳೂರು: ಕೇಂದ್ರ ಸರ್ಕಾರದ ನಾನಾ ಯೋಜನೆಗಳ ಫ‌ಲಾನುಭವಿಗಳು ಹಾಗೂ ಬಿಜೆಪಿ ಕಾರ್ಯಕರ್ತರೆಲ್ಲಾ ಒಟ್ಟುಗೂಡಿ ಸಾಮೂಹಿಕವಾಗಿ ಜ್ಯೋತಿ ಬೆಳಗಿಸುವ ಮೂಲಕ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮ ನಡೆಸಿದರು.

Advertisement

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವೈವಿಧ್ಯದ ಕಾರ್ಯಕ್ರಮಗಳ ಮೂಲಕ ಸಂಘಟನೆಗೆ ಒತ್ತು ನೀಡಿರುವ ಬಿಜೆಪಿ, ಮಂಗಳವಾರ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮ ಆಚರಿಸಿತು. ಮಂಗಳವಾರ ನಸುಕಿನಲ್ಲಿ ಭಾರತೀಯ ವಾಯುಪಡೆಯು ಉಗ್ರ ಸಂಘಟನೆಯ ಶಿಬಿರದ ಮೇಲೆ ಯಶಸ್ವಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮದಿಂದ ಪಾಲ್ಗೊಂಡಿದ್ದರು.

ಸಂಜಯನಗರದ ಡಾಲರ್ ಕಾಲೋನಿಯಲ್ಲಿನ ಧವಳಗಿರಿ ನಿವಾಸದ ಬಳಿ ವಿಶಾಲವಾಗಿ ಬಿಡಿಸಲಾದ ಕಮಲಾಕೃತಿಯ ರಂಗೋಲಿಗಳ ಮೇಲೆ ಜೋಡಿಸಲಾಗಿದ್ದ ಜೋತಿಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕಾರ್ಯಕರ್ತರೊಂದಿಗೆ ಬೆಳಗಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಬಿಎಸ್‌ವೈ, ಮಂಗಳವಾರ ಭಾರತಕ್ಕೆ ಹೆಮ್ಮೆಯ ದಿನ. ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ಉಗ್ರರನ್ನು ಸದೆಬಡಿದ ಭಾರತೀಯ ಯೋಧರಿಗೆ ಕೋಟಿ ಕೋಟಿ ನಮನಗಳು. ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನದ ಕುತಂತ್ರ ಬುದ್ಧಿಯನ್ನು ವಿಶ್ವದ ಎದುರು ಬಯಲು ಮಾಡಿದ್ದಾರೆ.

ಆ ಮೂಲಕ ವಿಶ್ವ ಸಮುದಾಯದ ಎದುರು ಪಾಕಿಸ್ತಾನ ಏಕಾಂಗಿಯಾಗುವಂತೆ ಮಾಡಿದ್ದಾರೆ. ಭಾರತದ ಮುಂದೆ ಪಾಕಿಸ್ತಾನ ಮಂಡಿಯೂರುವಂತೆ ಮಾಡಿದ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸಲೇ ಬೇಕು ಎಂದರು. ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಶಾಸಕ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಭಾಗವಹಿಸಿದ್ದರು.

Advertisement

ಜಯನಗರದಲ್ಲಿ ನಡೆದ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ವಿಧಾನಸಭೆ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ, ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್‌.ಸದಾಶಿವ ಇತರರು ಪಾಲ್ಗೊಂಡಿದ್ದರು. ವರ್ಣಮಯ ರಂಗೋಲಿ ನಡುವೆ ಜೋತಿ ಬೆಳಗಿಸಲಾಯಿತು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಸಂಜಯನಗರ ಮುಖ್ಯರಸ್ತೆಯಲ್ಲಿರುವ ರಾಧಾಕೃಷ್ಣ ದೇವಸ್ಥಾನದ ಬಳಿ ನಡೆದ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನು ಹುರಿದುಂಬಿಸಿದರು. ಇದರೊಂದಿಗೆ ಬೆಂಗಳೂರಿನ 4,000ಕ್ಕೂ ಹೆಚ್ಚು ಬೂತ್‌ಗಳಲ್ಲಿ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next