Advertisement

ಕಮಲನಗರ: ಮತದಾನ ಜಾಗೃತಿ ಅಭಿಯಾನ

12:23 PM Apr 07, 2018 | Team Udayavani |

‌ಮಲನಗರ: ಇಲ್ಲಿಯ ವಾರ್ಡ್‌ ಸಂಖ್ಯೆ 2ರಲ್ಲಿ ಮತದಾನ ಜಾಗೃತಿ ಅಭಿಯಾನ ನಡೆಯಿತು. ಮನೆ-ಮನೆಗೆ ಭೇಟಿ ನೀಡಿ ಚುನಾವಣೆಯಲ್ಲಿ 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡಬೇಕು. ಯುವಕರು, ವೃದ್ಧರು ನಿರ್ಭಯವಾಗಿ ಮತದಾನ ಮಾಡಬೇಕು ಎಂದು ತಿಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಕಾರ್ಯದರ್ಶಿ ಸಂಗಯ್ಯಸ್ವಾಮಿ, ಪ್ರಜಾಪ್ರಭುತ್ವದಲ್ಲಿ ಮತದಾರರ ಪಾತ್ರ ಮಹತ್ತರವಾಗಿದೆ. ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.

Advertisement

ಗ್ರಾಮ ಲೆಕ್ಕಾಧಿಕಾರಿ ನಾಗರಾಜ ಮಾತನಾಡಿ, ಯಾವುದೇ ಆಮಿಷಕ್ಕೆ ಬಲಿಯಾಗದೆ ಒಳ್ಳೆಯ ಅಭ್ಯರ್ಥಿಗೆ ತಮ್ಮ ಅಮೂಲ್ಯವಾದ ಮತದಾನ ಮಾಡಬೇಕು ಎಂದು ಹೇಳಿದರು. ಮತಗಟ್ಟೆ ಅಧಿಕಾರಿ ಕಾವೇರಿ ಟೊಣ್ಣೆ, ಆಶಾ ಕಾರ್ಯಕರ್ತೆ ಮೀನಾಕ್ಷಿ, ತಹಶೀಲ್ದಾರ ಕಚೇರಿ ಸಿಬ್ಬಂದಿ  ಅಬ್ದುಲ್‌ ಗಣಿ ಹಾಗೂ ಗ್ರಾಪಂ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next