Advertisement

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

09:36 PM Jun 29, 2024 | Team Udayavani |

ಸಿದ್ದಾಪುರ: ಮನೆ ಕಟ್ಟಲು ಸಂಘ ಸಂಸ್ಥೆಗಳಲ್ಲಿ ಮತ್ತು ಸ್ಥಳೀಯ ಸಹಕಾರಿ ಸಂಘದಲ್ಲಿ ಸಾಲ ಮಾಡಿದ್ದ ಕಮಲಶಿಲೆಯ ಪ್ರಸಾದ(30) ಅವರು ಸರಿಯಾದ ಕೆಲಸ ಇಲ್ಲದೆ ಮತ್ತು ಸಾಲ ತೀರಿಸಲಾಗದೆ ಮನನೊಂದು ಜೂ. 20ರಂದು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದರು.

Advertisement

ಅವರನ್ನು ಹಾಲಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.

ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯ ಮೇರೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಿಸದೆ ಜೂ. 28ರಂದು ನಿಧನ ಹೊಂದಿದರು. ಸಹೋದರ ಪ್ರಸಾದ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next