Advertisement

ಕಂಬಳ: ಸು.ಕೋ.ನಲ್ಲಿ ಪೆಟಾ ವರದಿ ಸಲ್ಲಿಕೆ

01:32 AM Oct 22, 2019 | Team Udayavani |

ಮಂಗಳೂರು: ಪೆಟಾ ಸಂಘಟನೆಯು ಕಳೆದ ಋತುವಿನಲ್ಲಿ ನಡೆದಿರುವ ಕಂಬಳಗಳ ಬಗ್ಗೆ ಮಾಡಿರುವ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವುದಾಗಿ ತಿಳಿಸಿದೆ.

Advertisement

ಪೆಟಾ ಕಳೆದ ವರ್ಷ ಡಿಸೆಂಬರ್‌ ಮತ್ತು ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ನಡೆದ ಬಾರಾಡಿಬೀಡು, ಮೂಡುಬಿದಿರೆ, ಮಂಗಳೂರು ಮತ್ತು ತಿರುವೈಲ್‌ನಲ್ಲಿ ನಡೆದಿರುವ ಕಂಬಳಗಳಲ್ಲಿ ತಪಾಸಣೆ ಮಾಡಿದ್ದು, ಕೋಣಗಳ ಮೇಲಿನ ಹಿಂಸೆ ಮತ್ತು ಕೌರ್ಯವನ್ನು ತಡೆಯಲು ಕರ್ನಾಟಕದ ಕಂಬಳಗಳು ವಿಫಲವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.

ಪೆಟಾ ಇಂಡಿಯಾದಿಂದ ತಪಾಸಣೆ ಮಾಡಲಾದ ಎಲ್ಲ 4 ಕಂಬಳಗಳಲ್ಲಿ ಕಂಬಳ ಓಟದ ಸ್ಪರ್ಧೆಗೆ ಅನುವು ಮಾಡಿಕೊಡುವ ರಾಜ್ಯದ ತಿದ್ದುಪಡಿಗಳು ಕೋಣಗಳನ್ನು ಹಿಂಸೆಯಿಂದ ರಕ್ಷಿಸುವಲ್ಲಿ ಎಷ್ಟು ಅನುಪಯುಕ್ತ ಎನ್ನುವುದನ್ನು ಎತ್ತಿ ತೋರಿಸುತ್ತದೆ. ಪೆಟಾ ದಾಖಲು ಮಾಡಿರುವ ದೂರು ಕರ್ನಾಟಕದ ಹೊಸ ಕಾನೂನಿನ ಸಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುತ್ತದೆ ಮತ್ತು ಅದನ್ನು ಕಿತ್ತು ಹಾಕಲು ನಿರ್ದೇಶನವನ್ನು ಕೋರುತ್ತದೆ ಎಂದು ಪೆಟಾದ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next