Advertisement

Kanahosahalli: ತಡರಾತ್ರಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಾನಸಿಕ ಅಸ್ವಸ್ಥೆಯ ಹತ್ಯೆ

01:33 PM Aug 31, 2024 | Team Udayavani |

ಕಾನಾಹೊಸಹಳ್ಳಿ (ವಿಜಯನಗರ): ವಿಜಯನಗರ ಜಿಲ್ಲೆಯ ಕಾನಾಹೊಸಹಳ್ಳಿ ಹೋಬಳಿಯ ತಿಪ್ಪೆಹಳ್ಳಿ ಗ್ರಾಮದ ಹೊರಹೊಲಯದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ,

Advertisement

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಅಬ್ಬೇನಹಳ್ಳಿ ಗ್ರಾಮದ ನೇತ್ರಾವತಿ (30) ಕೊಲೆಯಾದ ದುರ್ದೈವಿ, ಹಲವು ವರ್ಷಗಳಿಂದ ನೇತ್ರಾವತಿ ಮಾನಸಿಕ ಅಸ್ವಸ್ಥಳಾಗಿದ್ದು ಸುತ್ತಮುತ್ತಲಿನ ಗ್ರಾಮಗಳಲ್ಲಿ ಓಡಾಡಿಕೊಂಡಿದ್ದಳು ಎನ್ನಲಾಗಿದೆ. ಶುಕ್ರವಾರ ( ಆಗಸ್ಟ್ 30) ತಡರಾತ್ರಿ ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಯ ಗಡಿಭಾಗದಲ್ಲಿ ಕೃತ್ಯ ನಡೆದಿದ್ದು ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ಕಂಡುಬಂದಿದೆ.

ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು, ಹಾಗೂ ಶ್ವಾನದಳ, ಬೆರಳಚ್ಚು ತಜ್ಞರ ತಂಡ ಹಾಗೂ ಕೂಡ್ಲಿಗಿ ಡಿವೈ ಎಸ್ ಪಿ ಮಲ್ಲೇಶಪ್ಪ ಮಲ್ಲಾಪುರ, ಹಾಗೂ ಸಿಪಿಐ ವೆಂಕಟಸ್ವಾಮಿ, ಕಾನಾಹೊಸಹಳ್ಳಿ ಪಿಎಸೈ ಸಿದ್ದರಾಮಪ್ಪ ಬಿದರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,

ಇದನ್ನೂ ಓದಿ: Sedam: ಐತಿಹಾಸಿಕ ಮಳಖೇಡ ಕೋಟೆಯ ಗೋಡೆ ಕುಸಿತ… ನಿವಾಸಿಗಳಲ್ಲಿ ಆತಂಕ

Advertisement
Advertisement

Udayavani is now on Telegram. Click here to join our channel and stay updated with the latest news.

Next