Advertisement

Kanahosahalli; ಅರಣ್ಯಾಧಿಕಾರಿ ಪತ್ನಿ ಮನೆಗೆ ಲೋಕಾಯುಕ್ತ ದಾಳಿ

11:03 AM Oct 30, 2023 | Team Udayavani |

ವಿಜಯನಗರ: ಜಿಲ್ಲೆಯ ಕಾನಹೊಸಹಳ್ಳಿ ಪಟ್ಟಣದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

Advertisement

ರಾಣೆಬೆನ್ನೂರಿನ ಅರಣ್ಯ ವಲಯಧಿಕಾರಿ ಮಹಾಂತೇಶ್ ಅವರ ಪತ್ನಿ ಹೇಮಾವತಿ ಅವರ ಹೆಸರಿನಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗ್ಗೆ ಐದು ಗಂಟೆಯಿಂದ ಪರಿಶೀಲನೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು, ಹೇಮಾವತಿ ಅವರ ತಂದೆ ಮುದ್ದಪ್ಪರ ತಿಪ್ಪೇಸ್ವಾಮಿ ಅವರೊಂದಿಗೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ದಾವಣಗೆರೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಮಧಸೂಧನ್ ಸಿ ನೇತೃತ್ವದ ಎಂಟು ಜನರ ತಂಡ ದಾಳಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next