Advertisement

ಕನಕದಾಸ ಜಯಂತ್ಯುತ್ಸವಕ್ಕೆ ಸಿದ್ದತೆ

11:49 AM Nov 18, 2018 | |

ಬೀದರ: ನ.26ರಂದ ಭಕ್ತ ಶ್ರೇಷ್ಠ ಕನಕದಾಸ ಜಯಂತ್ಯುತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಎಚ್‌. ಆರ್‌. ಮಹಾದೇವ ಅವರು ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕನಕದಾಸರ ಜಯಂತ್ಯುತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಚೇರಿಗಳಲ್ಲಿ ಪೂಜೆ ಕಾರ್ಯಕ್ರಮದ ಬಳಿಕ ಎಲ್ಲ ಅಧಿಕಾರಿಗಳು ನೇರವಾಗಿ ಬೊಮ್ಮಗೊಂಡೇಶ್ವರ ವೃತ್ತಕ್ಕೆ ಆಗಮಿಸಬೇಕು. ಸಮಾಜದ ಬಾಂಧವರು ಹೆಚ್ಚು ಸಂಖ್ಯೆಯಲ್ಲಿ ಸೇರಿ ವಿಜೃಂಭಣೆಯಿಂದ ಜಯಂತಿ ಆಚರಣೆಗೆ ಸಹಕಾರಿಸಬೇಕು ಎಂದರು. ಮೆರವಣಿಗೆಯಲ್ಲಿ 2 ಕಲಾ ತಂಡಗಳು ಹಾಗೂ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದಾಸರ ಪದಗಳ ಹಾಡಿಗೆ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲಿ ಜಯಂತಿ ಆಚರಣೆಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಸಮಾಜದ ಮುಖಂಡರು ಕೋರಿದರು. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯ ಬೆಳಗ್ಗೆ 9 ಗಂಟೆಗೆ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಕ್ರಮ ವಹಿಸುವಂತೆ ಎಲ್ಲ
ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ಸುತೋ¤ಲೆ ಮೂಲಕ ತಿಳಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು. 

ನಗರದ ಬರೀದ್‌ ಶಾಹಿ ವೃತ್ತದಲ್ಲಿ ಇಲ್ಲವೇ ನಗರದ ಪ್ರಮುಖ ಸ್ಥಳವೊಂದರಲ್ಲಿ ಕನಕದಾಸರ ಮೂರ್ತಿಯನ್ನು ಪ್ರತಿಷ್ಠಾಪಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಮುಖಂಡ ಸಂತೋಷ ಜೋಳದಾಪಕೆ ಸಭೆಗೆ ತಿಳಿಸಿದರು. ತಮ್ಮ ಬೇಡಿಕೆಯನ್ನು ಸರ್ಕಾರಕ್ಕೆ ತಿಳಿಸಲಾಗುವುದು. ಈ ಬಗ್ಗೆ ಸೂಕ್ತ ಮಾರ್ಗದರ್ಶನ ಮಾಡಲು ಮತ್ತು ಇದಕ್ಕೆ ಅನುಮತಿ ನೀಡಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲದೇ ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಕಾರಿಗಳು ತಿಳಿಸಿದರು.

ಎಲ್ಲ ಸರ್ಕಾರಿ ಹಾಗೂ ಅರೆಸರ್ಕಾರಿ ಕಚೇರಿ, ಸಂಘ ಸಂಸ್ಥೆಗಳಲ್ಲಿ ಬೆಳಗ್ಗೆ 10ಕ್ಕೆ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ 11:30ಕ್ಕೆ ಪೂಜೆ ನಡೆಯಲಿದೆ. ನಂತರ ಬೊಮ್ಮಗೊಂಡೇಶ್ವರ ಸರ್ಕಲ್‌ನಿಂದ 11:30ಕ್ಕೆ ಮೆರವಣಿಗೆಗೆ ಚಾಲನೆ ನೀಡಲಾಗುವುದು. ವೇದಿಕೆ ಕಾರ್ಯಕ್ರಮ ಜಿಲ್ಲಾ ರಂಗಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ರಾಜಶೇಖರ ವಟಗೆ ಸಭೆಗೆ ಮಾಹಿತಿ ನೀಡಿದರು.

Advertisement

ನಿಬಂಧ ಸ್ಪರ್ಧೆ: ಕನಕದಾಸರ ಜೀವನಚರಿತ್ರೆ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಅಪರ ಜಿಲ್ಲಾ ಧಿಕಾರಿ ರುದ್ರೇಶ ಗಾಳಿ, ಸಮಾಜದ ಮುಖಂಡರಾದ ಅಮೃತರಾವ್‌ ಚಿಮಕೋಡ, ಮಲ್ಲಿಕಾರ್ಜುನ ಬಿರಾದಾರ, ಮಾಳಪ್ಪ ಅಡಸಾರೆ, ವಿಜಯಕುಮಾರ್‌ ಸೋನಾರೆ, ಲಕ್ಷ್ಮಣ ಮೇತ್ರೆ, ತುಕಾರಾಮ ಚಿಮಕೋಡೆ, ಕೆ.ಡಿ. ಗಣೇಶ ಹಾಗೂ
ಇತರರು ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next