Advertisement

ಕನಕದಾಸರ ಪುತ್ಥಳಿ ಲೋಕಾರ್ಪಣೆ

05:59 PM Nov 25, 2021 | Team Udayavani |

ಯಾದಗಿರಿ: ಹಾಲುಮತ ಸಮುದಾಯದ ಜನತೆ ಮುಗ್ದ ಹಾಗೂ ಶ್ರಮ ಜೀವಿಗಳಾಗಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಯುವ ನಾಯಕ ಶರಣಗೌಡ ಕಂದಕೂರ ತಿಳಿಸಿದರು.

Advertisement

ಗೋಪಾಳಪುರ ಗ್ರಾಮದಲ್ಲಿ ಕನಕದಾಸರ ಜಯಂತಿ ಹಾಗೂ ನೂತನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗೋಪಾಳಪುರದಲ್ಲಿ ಇಷ್ಟೊಂದು ಅದ್ಧೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಕನಕದಾಸರ ಪುತ್ಥಳಿ ಸ್ಥಾಪನೆ ಮಾಡಿರುವುದು ಶ್ಲಾಘನೀಯ. ಯುವಕರು ದಾಸರ ಆದರ್ಶಗಳ ಪಾಲನೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು. ಕುರುಬ ಸಮಾಜದ ತಾಲೂಕಾಧ್ಯಕ್ಷ ಹೊನ್ನಪ್ಪ ಮುಷ್ಟೂರು, ಪ್ರಮುಖರಾದ ಅಜೆಯರಡ್ಡಿ ಯಲ್ಹೇರಿ, ನರಸಪ್ಪ ಕವಡೆ, ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ಬೀರೇಶ ಚಿರತೆನೊರ ಇದ್ದರು. ಮುನ್ನ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next