Advertisement

Kanakapura; ಪೊಲೀಸರ ಮೇಲೆ ಹಲ್ಲೆ ಯತ್ನ; ರೌಡಿಶೀಟರ್ ಗಳಿಬ್ಬರಿಗೆ ಗುಂಡೇಟು

09:25 AM Jul 28, 2024 | Team Udayavani |

ರಾಮನಗರ: ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಗಳ ಮೇಲೆ ಪೋಲಿಸರು ಫೈರಿಂಗ್ ನಡೆಸಿದ ಘಟನೆ ಕನಕಪುರದಲ್ಲಿ ನಡೆದಿದೆ. ಕನಕಪುರ ಟೌನ್ ಸಿಪಿವೈ ಮಿಥುನ್ ಶಿಲ್ಪಿ ಹಾಗೂ ಪಿಎಸ್ಐ ಮನೋಹರ್ ಅವರು ರೌಡಿಗಳಿಗೆ ಗುಂಡಿನ ರುಚಿ ತೋರಿಸಿದ್ದಾರೆ.

Advertisement

ರೌಡಿಶೀಟರ್ ಗಳಾದ ಹರ್ಷ ಅಲಿಯಾಸ್ ಕೈಮ, ಕರುಣೇಶ್ ಅಲಿಯಾಸ್ ಕಣ್ಣ ಎಂಬರಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.

ಈ ಆರೋಪಿಗಳು ಕಳೆದ ಮೂರು ದಿನಗಳ‌‌ ಹಿಂದೆ ಕನಕಪುರ ತಾಲ್ಲೂಕಿನ ಮಳಗಾಳು ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿ ಓರ್ವನ ಕೈ ತುಂಡು ಮಾಡಿ ಪರಾರಿಯಾಗಿದ್ದರು. ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ದಲಿತ‌‌ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು.

ಹರ್ಷ, ಹಾಗೂ ಕರುಣೇಶ್ ಮೇಲೆ‌ 5 ಕ್ಕೂ ಹೆಚ್ಚು ಕೇಸ್ ಗಳು‌ ಇದ್ದವು. ರವಿವಾರ ಮುಂಜಾನೆ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೋಲಿಸರ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ. ಆರೋಪಿಗಳನ್ನು ಬಂಧಿಸಲು ಕನಕಪುರ ಟೌನ್ ಸಿಪಿಐ ಮಿಥುನ್ ಶಿಲ್ಪಿ, ಗ್ರಾಮಾಂತರ ಸಿಪಿಐ ಕೃಷ್ಣ ಲಮ್ಮಾಣಿ,‌ ಪಿಎಸೈಗಳಾದ ಮನೋಹರ್, ರವಿಕುಮಾರ್ ನೇತೃತ್ವದ ತಂಡ ತೆರಳಿತ್ತು. ಈ ವೇಳೆ ಕಗ್ಗಲೀಪುರದ ವ್ಯಾಲಿ ಸ್ಕೂಲ್ ರೋಡ್ ಬಳಿ ಫೈರಿಂಗ್ ನಡೆಸಲಾಗಿದೆ.

ಫೈರಿಂಗ್ ವೇಳೆ ಸಿಬ್ಬಂದಿಗಳಾದ ರಾಜಶೇಖರ್, ಶಿವಕುಮಾರ್ ಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next