Advertisement

ಕನಕಪುರ :ಕಾರು ಢಿಕ್ಕಿಯಾಗಿ ದ್ವಿಚಕ್ರ ವಾಹನದದಲ್ಲಿದ್ದ ತಂದೆ ಮಗ ಸಾವು

09:32 PM Nov 11, 2022 | Team Udayavani |

ಕನಕಪುರ: ತಾಲೂಕಿನ ಸಾತನೂರು ಹೋಬಳಿ ತೋಟಹಳ್ಳಿ ಗ್ರಾಮದ ರಸ್ತೆ ತಿರುವಿನಲ್ಲಿ ಕಾರು ಢಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮತ್ತು ಮಗ ಸಾವನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

Advertisement

ತೋಟಹಳ್ಳಿ ಗ್ರಾಮದ ರಸ್ತೆ ತಿರುವಿನಲ್ಲಿ ಈ ಘಟನೆ ನಡೆದಿದ್ದು ಸಾತನೂರು ಹೋಬಳಿ ತೋಟಹಳ್ಳಿ ಗ್ರಾಮದ ಚಿಕ್ಕಪುಟ್ಟಯ್ಯ (60) ಮತ್ತು ಅವರ ಮಗ ಮಹೇಶ್ (30) ಮೃತಪಟ್ಟ ದುರ್ದೈವಿಗಳು. ಇಬ್ಬರು ದ್ವಿಚಕ್ರ ವಾಹನದದಲ್ಲಿ ತಮ್ಮ ಮನೆ ಹೋಗುತ್ತಿದ್ದಾಗ ಘಟನೆ ನಡೆದಿದೆ

ದ್ವಿಚಕ್ರವಾಹನದಲ್ಲಿ ದಿನಸಿ ವ್ಯಾಪಾರ ಮಾಡುತ್ತಿದ್ದ ತಂದೆ ಮಗ ಇಬ್ಬರು ಶುಕ್ರವಾರ ವ್ಯಾಪಾರ ಮುಗಿಸಿಕೊಂಡು ತೋಟಹಳ್ಳಿಯಲ್ಲಿರುವ ಮನೆಯ ಕಡೆಗೆ ಹೋಗುತ್ತಿದ್ದಾಗ ತೋಟಹಳ್ಳಿ ಗ್ರಾಮದಿಂದ ವೇಗವಾಗಿ ಬಂದ ಕಾರಿನ ನಡುವೆ ಕೆರೆಯ ಬಳಿ ರಸ್ತೆ ತಿರುವಿನಲ್ಲಿ ಮುಖಾಮುಖಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಸಾತನೂರು ಪೊಲೀಸರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next