Advertisement

ಕಂಚಿ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಶ್ರೀ ಕಾಲೈಕ್ಯ 

09:42 AM Feb 28, 2018 | |

ಕಂಚೀಪುರಂ: ಕಾಮಕೋಟಿ ಮಠದ ಶಂಕರಾಚಾರ್ಯ ಪೀಠದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರು ಗುರುವಾರ ಕಾಲೈಕ್ಯರಾಗಿದ್ದಾರೆ.ಅವರಿಗೆ 82 ವರ್ಷ ವಯಸ್ಸಾಗಿತ್ತು. 

Advertisement

1954 ರಿಂದ ಕಂಚಿ ಪೀಠದ 69 ನೇ ಪೀಠಾಧಿಪತಿಯಾಗಿ ಜಯೇಂದ್ರ ಸರಸ್ವತಿಗಳು ಧಾರ್ಮಿಕ ಕಾರ್ಯಗಳಲ್ಲಿ ನಿರತರಾಗಿದ್ದರು. 

ವಯೋಸಹಜ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀಗಳು ಚೆನ್ನೈನ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ  ಕೊನೆಯುಸಿರೆಳೆದಿರುವುದಾಗಿ ವರದಿಯಾಗಿದೆ.

ಹಲವು ವಿವಾದಗಳು, ಪ್ರಕರಣಗಳೂ ಶ್ರೀಗಳ ವಿರುದ್ಧ ಕೇಳಿ ಬಂದಿದ್ದವು. 

ಶ್ರೀಗಳಿಗೆ ತಮಿಳು ನಾಡು ಸೇರಿದಂತೆ ವಿಶ್ವಾದ್ಯಂತ ಅಪಾರ ಭಕ್ತರಿದ್ದಾರೆ. 

Advertisement

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next