Advertisement

ಚಿಕ್ಕಬಳ್ಳಾಪುರದ ಕಂದವಾರ ಕೆರೆ ತಲುಪಿದ ಹೆಚ್ಎನ್ ವ್ಯಾಲಿ ನೀರು

11:51 AM Feb 06, 2020 | keerthan |

ಚಿಕ್ಕಬಳ್ಳಾಪುರ:  ಜಿಲ್ಲೆಯ ಅಂತರ್ಜಲವನ್ನು ವೃದ್ದಿಸುವ ನಿಟ್ಟಿನಲ್ಲಿ ಕೆರೆಗಳಿಗೆ ನೀರು‌ ಹರಿಸುವ ಬರೋಬರಿ 883 ಕೋಟಿ ರೂ ವೆಚ್ಚದಲ್ಲಿ ರೂಪಿಸಿರುವ ಹೆಬ್ಬಾಳ ನಾಗವಾರ ಸಂಸ್ಕರಿತ ತ್ಯಾಜ್ಯ ನೀರು ಯೋಜನೆಯ ಕಾಮಗಾರಿ ಪೂರ್ಣಗೊಂಡು ಇಂದು‌ ಬೆಂಗಳೂರಿನ ಬಾಗಲೂರು ಕೆರೆಯಿಂದ ಚಿಕ್ಕಬಳ್ಳಾಪುರ ಕಂದವಾರ ಕೆರೆಗೆ ನೀರು ಹರಿಸಲಾಗಿದೆ.

Advertisement

ಒಟ್ಟು 114 ಕಿ.ಮೀ ಉದ್ದದ ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದ್ದು ಕಂದವಾರ ಕೆರೆಗೆ ನೀರು ಹರಿಸಲಾಗಿದೆ. ವಾರ್ಷಿಕ 2.70 ಟಿಎಂಸಿ ನೀರು ಹರಿಸುವ ಗುರಿ ಹೊಂದಲಾಗಿದೆ.

ಕಂದವಾರ ಕೆರೆಯಿಂದ ಜಿಲ್ಲೆಯ ಒಟ್ಟು 44 ಕೆರೆಗಳಿಗೆ ನೀರು ಹರಿಸಲಾಗುತ್ತದೆ. ಸಣ್ಣ ನೀರಾವರಿ ಇಲಾಖೆಯಿಂದ ಕಾಮಗಾರಿ ಮಾಡಲಾಗಿದ್ದು ಕಂದವಾರ ಕೆರೆಯಲ್ಲಿ ಜಿಲ್ಲೆಯ ಇತರೆ ಕೆರೆಗಳಿಗೆ ನೀರು ಹರಿಸಲು ಬೃಹತ್ ಪಂಪ್ ಹೌಸ್ ನಿರ್ಮಿಸಲಾಗಿತ್ತು. ಜಿಲ್ಲೆಗೆ ನೀರಾವರಿ ಕಲ್ಪಿಸುವ ನಿಟ್ಟಿನಲ್ಲಿ ರೂಪಿಸಿ ಅನುಷ್ಠಾನ ಮಾಡಲಾಗುತ್ತಿರುವ ಎತ್ತಿನಹೊಳೆ ಯೋಜನೆ ವಿಳಂಬ ಆಗಲಿದೆ ಎಂದು ಹೇಳಿ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೆಬ್ಬಾಳ ನಾಗವಾರ‌ ನೀರಾವರಿ ಯೋಜನೆಗೆ‌ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next