Advertisement

Kannada Cinema; ಡಿಸೆಂಬರ್‌ನಲ್ಲಿ “ಕಾಣೆಯಾಗಿದ್ದಾಳೆ ಹುಡುಕಿಕೊಟ್ಟವರಿಗೆ ಬಹುಮಾನ”

06:35 PM Nov 30, 2023 | Team Udayavani |

“ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್‌’ ಲಾಂಛನದಲ್ಲಿ ನಿರ್ಮಾಣ ವಾಗಿರುವ, ಆರ್‌. ಕೆ ನಿರ್ದೇಶಿಸಿರುವ “ಕಾಣೆಯಾಗಿದ್ದಾಳೆ ಹುಡುಕಿಕೊಟ್ಟವರಿಗೆ ಬಹುಮಾನ’ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಇದೇ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಲಿದೆ.

Advertisement

ಇತ್ತೀಚಿಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಯಿತು. ಇದೊಂದು ನೈಜ ಹಾಗೂ ಕಾಲ್ಪನಿಕ ಕಥಾ ಆಧಾರಿತ ಚಿತ್ರ. ಸಾಮಾಜಿಕ ಜಾಲತಾಣಗಳನ್ನು ಹೆಣ್ಣುಮಕ್ಕಳು ನಿಯಮಿತವಾಗಿ ಬಳಸಬೇಕು. ಇಲ್ಲದಿದ್ದರೆ ಅಪಾಯ ಖಂಡಿತ ಎಂಬ ವಿಷಯವನ್ನು ಈ ಚಿತ್ರದ ಮೂಲಕ ಹೇಳಿದ್ದೇವೆ. ಕರ್ನಾಟಕದ 30-40 ಸುಂದರ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರ ಡಿಸೆಂಬರ್‌ನಲ್ಲಿ ತೆರೆಗೆ ಬರಲಿದೆ ಎಂದು ನಿರ್ದೇಶಕ ಆರ್‌. ಕೆ ತಿಳಿಸಿದರು.

ಇದು ನನ್ನ ಮೊದಲ ಚಿತ್ರ. ಕಾಲೇಜು ಹುಡುಗನ ಪಾತ್ರ ನನ್ನದು. ತಾಯಿ – ಮಗನ ಬಾಂಧವ್ಯದ ಸನ್ನಿವೇಶಗಳು ಚಿತ್ರದ ಹೈಲೆಟ್‌ ಎಂದರು ನಾಯಕ ವಿನಯ್‌ ಕಾರ್ತಿ. ಹಳ್ಳಿಯಿಂದ ನಗರಕ್ಕೆ ಬಂದ ಹುಡುಗಿಯ ಪಾತ್ರ ನನ್ನದು. ನಿರ್ದೇಶಕರು ಕಥೆ ತುಂಬಾ ಚೆನ್ನಾಗಿ ಮಾಡಿದ್ದಾರೆ ಎಂದು ಕೀರ್ತಿ ಭಟ್‌ ತಿಳಿಸಿದರು.

ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದು ಮಾತನಾಡಿದ ಹಿರಿಯ ನಟಿ ಗಿರಿಜಾ ಲೋಕೇಶ್‌, ನಾನು ನಾಯಕನ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಯಶೋಧ ಹಾಗೂ ಕೃಷ್ಣನ ಪ್ರೀತಿ ತರಹ ಈ ತಾಯಿ – ಮಗನ ಪ್ರೀತಿ ಎಂದರು. ಚಿತ್ರದ ಮತ್ತೂಬ್ಬ ನಾಯಕಿ ಹರ್ಷಿತಾ ಕಲಿಂಗಲ್‌ ಸಹ ಚಿತ್ರದ ಕುರಿತು ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next