Advertisement

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

01:06 PM May 06, 2024 | Team Udayavani |

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್ ಸದಾ ಒಂದಲ್ಲ ಒಂದು ಹೇಳಿಕೆಯಿಂದ ಸುದ್ದಿಯಲ್ಲಿರುತ್ತಾರೆ. ಅವರ ಕೆಲವೊಂದು ಹೇಳಿಕೆಗಳು ವಿವಾದಕ್ಕೀಡಾಗುವುದು ಉಂಟು.

Advertisement

ಕಂಗನಾ  ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಈಕೆಯ ವಿರುದ್ಧ ಕಾಂಗ್ರೆಸ್‌ನಿಂದ ವಿಕ್ರಮಾದಿತ್ಯ ಸಿಂಗ್‌ ಕಣಕ್ಕಿಳಿದಿದ್ದಾರೆ.

ಸದ್ಯ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಅವರು,ಇತ್ತೀಚೆಗೆ ಕೊಟ್ಟಿರುವ ಹೇಳಿಕೆಯೊಂದು ವೈರಲ್‌ ಆಗಿದೆ.

ಚಿತ್ರರಂಗದಲ್ಲಿ ಚಿತ್ರರಂಗದಲ್ಲಿ ಅಮಿತಾಬ್ ಬಚ್ಚನ್ ಅವರಿಗೆ ಸಿಗುತ್ತಿರುವ ಗೌರವ – ಪ್ರೀತಿ ನನಗೂ ಸಿಗುತ್ತಿದೆ ಎಂದು ಕಂಗನಾ ಹೇಳಿದ್ದಾರೆ.

“ಇಡೀ ದೇಶಕ್ಕೆ ಅಚ್ಚರಿಯಾಗಿದೆ. ನಾನು ರಾಜಸ್ಥಾನ, ಪಶ್ಚಿಮ ಬಂಗಾಳ, ನವದೆಹಲಿಗೆ ಹೋದರೂ ಅಥವಾ ಮಣಿಪುರಕ್ಕೆ ಹೋದರೂ ಜನ ನನ್ನನ್ನು ತುಂಬಾ ಪ್ರೀತಿ ಮತ್ತು ಗೌರವದಿಂದ ನೋಡುತ್ತಾರೆ. ಅಮಿತಾಭ್ ಬಚ್ಚನ್ ನಂತರ ಯಾರಿಗಾದರೂ ಇಂಡಸ್ಟ್ರಿಯಲ್ಲಿ ಅಂತಹ ಪ್ರೀತಿ ಮತ್ತು ಗೌರವ ಸಿಕ್ಕಿದರೆ ಅದು ನನಗೆ ಎಂದು ಆತ್ಮವಿಶ್ವಾಸದಿಂದ ನಾನು ಹೇಳಬಲ್ಲೆ” ಎಂದು ನಟಿ ಹೇಳಿದ್ದಾರೆ.

Advertisement

ಕಂಗನಾ ರಣಾವತ್ ಅವರು ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಿದ್ದು, ಸಿನಿಮಾ ವಿಚಾರಕ್ಕೆ ಬಂದರೆ ಕಂಗನಾ ನಿರ್ದೇಶನ ಮಾಡಿ ನಟಿಸಿರುವ ʼಎಮರ್ಜೆನ್ಸಿʼ ಸಿನಿಮಾ ಇದೇ ಜೂ. 14 ರಂದು ರಿಲೀಸ್‌ ಆಗಲಿದೆ. ಈ ಸಿನಿಮಾದಲ್ಲಿ ಕಂಗನಾ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next