Advertisement

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

01:04 AM May 21, 2024 | Team Udayavani |

ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣಾವತ್‌ಗೆ ಸೋಮವಾರ ಪ್ರಚಾರ ರ್ಯಾಲಿಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿರುವ ಘಟನೆ ನಡೆದಿದೆ. ಲಾಹೌಲ್‌ ಮತ್ತು ಸ್ಪೀತಿಯಲ್ಲಿ ಪ್ರಚಾರಕ್ಕೆ ತೆರಳಿದ್ದಾಗ ಕಾಂಗ್ರೆಸ್‌ ಕಾರ್ಯ ಕರ್ತರು ಗೋ ಬ್ಯಾಕ್‌ ಕಂಗನಾ ಎಂದು ಘೋಷಣೆ ಕೂಗಿ, ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಿದ್ದಾರೆಂದು ಬಿಜೆಪಿ ಆರೋಪಿಸಿದೆ.

Advertisement

ಕಳೆದ ವರ್ಷ ದಲೈಲಾಮಾರನ್ನು ಲೇವಡಿ ಮಾಡುವಂಥ ಮೀಮ್‌ ಕಂಗನಾ ಹಂಚಿಕೊಂಡಿದ್ದರು. ಈ ಹಿನ್ನೆಲೆ ಸ್ಥಳೀಯ ಬೌದ್ಧ ಸಮುದಾಯ ಕೂಡ ಪ್ರತಿಭಟನೆಯಲ್ಲಿ ಸೇರಿತ್ತು. ಇತ್ತ ಒಂದೇ ಪ್ರದೇಶದಲ್ಲಿ ಬಿಜೆಪಿ, ಕಾಂಗ್ರೆಸ್‌ ರ್ಯಾಲಿಗೆ ಅನುಮತಿ ನೀಡಿದ್ದಕ್ಕೆ ಹೀಗಾಗಿದೆ ಎಂದು ಬಿಜೆಪಿ ಆರೋಪಿಸಿ ಆಯೋಗಕ್ಕೆ ದೂರು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next